ಮೋದಿ ಫೋಸ್ಟರ್ ಗಳು 
ದೇಶ

ಮೋದಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಎಲ್ಲೆಡೆ ರಾರಾಜಿಸುತ್ತಿರುವ ಫೋಸ್ಟರ್ ಗಳು, ಬಿಗಿ ಭದ್ರತೆ

ದೇಶದ ಪ್ರಧಾನಿಯಾಗಿ ಮೋದಿ ಅವರ ಪಟ್ಟಾಭಿಷೇಕಕ್ಕೆ ಸಕಲ ತಯಾರಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಾದ್ಯಂತ ಮೋದಿ ಭಾವಚಿತ್ರವುಳ್ಳ ಫೋಸ್ಟರ್ ಗಳು, ಬ್ಯಾನರ್ ಗಳು ರಾರಾಜಿಸುತ್ತಿವೆ. ಜವಹರ್ ಲಾಲ್ ನೆಹರೂ ನಂತರ ದೇಶದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನವದೆಹಲಿ: ದೇಶದ ಪ್ರಧಾನಿಯಾಗಿ ಮೋದಿ ಅವರ ಪಟ್ಟಾಭಿಷೇಕಕ್ಕೆ ಸಕಲ ತಯಾರಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಾದ್ಯಂತ ಮೋದಿ ಭಾವಚಿತ್ರವುಳ್ಳ ಫೋಸ್ಟರ್ ಗಳು, ಬ್ಯಾನರ್ ಗಳು ರಾರಾಜಿಸುತ್ತಿವೆ. ಜವಹರ್ ಲಾಲ್ ನೆಹರೂ ನಂತರ ದೇಶದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 1, 100 ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕೆಲವೊಂದು ಮಾರ್ಗದಲ್ಲಿ ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ್ ಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಝೀಝು, ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವೀದ್ ಕುಮಾರ್ ಜಗುನಾಥ್, ನೇಪಾಳ ಪ್ರಧಾನಿ ಪುಷ್ಪ ಕಮಾಲ್ ದಹಾಲ್ ಪ್ರಚಂಡ, ಭೂತಾನ್ ಪ್ರಧಾನಿ ಭಾಗವಹಿಸುತ್ತಿರುವುದಾಗಿ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶ, ವಿದೇಶದ ಗಣ್ಯರಲ್ಲದೇ, ಸಂಸತ್ ನಿರ್ಮಾಣ ಮಾಡಿದ 250 ಕ್ಕೂ ಹೆಚ್ಚು ಕಾರ್ಮಿಕರು, ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹತ್ವದ ಕಾರ್ಯಕ್ರಮದಲ್ಲಿ ನೆರೆಹೊರೆಯವರಿಗೆ ಮೊದಲ ಆದ್ಯತೆ ಮತ್ತು ಸಾಗರ್ ದೂರದೃಷ್ಟಿಗೆ ಪ್ರಾಮುಖ್ಯತೆ ನೀಡಲಾಗಿದ್ದು, ವಿದೇಶಿ ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಔತಟ ಕೂಟ ಆಯೋಜಿಸಿರುವುದಾಗಿ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಇಂಡಿಯಾ ಬಣ 292 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT