ಅಚ್ಯುತಾನಂದ 
ದೇಶ

ಸಕ್ರಿಯ ರಾಜಕೀಯಕ್ಕೆ ಬಿಜೆಡಿ ಹಿರಿಯ ನಾಯಕ ಅಚ್ಯುತಾನಂದ ನಿವೃತ್ತಿ ಘೋಷಣೆ

ಬಿಜೆಡಿ ಹಿರಿಯ ನಾಯಕ ಅಚ್ಯುತಾನಂದ ಸಾಮಂತ ಅವರು ಲೋಕಸಭೆ ಚುನಾವಣೆಯ ಸೋಲಿನ ನಂತರ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಭುವನೇಶ್ವರ: ಬಿಜೆಡಿ ಹಿರಿಯ ನಾಯಕ ಹಾಗೂ ಕಂಧಮಾಲ್‌ನ ಮಾಜಿ ಸಂಸದ ಅಚ್ಯುತಾನಂದ ಸಾಮಂತ ಅವರು ಲೋಕಸಭೆ ಚುನಾವಣೆಯ ಸೋಲಿನ ನಂತರ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಸಾಮಂತಾ ಅವರು ಶನಿವಾರ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ಸಕ್ರಿಯೆ ರಾಜಕೀಯಕ್ಕೆ ನಿವೃತ್ತಿ ಘೋಷಿಸುವ ಇಚ್ಛೆ

ವ್ಯಕ್ತಪಡಿಸಿದ್ದರು. ಬಿಜೆಡಿ ಅಭ್ಯರ್ಥಿಯಾಗಿ ರಾಜ್ಯಸಭೆ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದ ಪಟ್ನಾಯಕ್ ಅವರಿಗೆ ಸಾಮಂತಾ ಅವರು ಧನ್ಯವಾದ ತಿಳಿಸಿದ್ದಾರೆ.

ಬಿಜೆಡಿ ಮಾಜಿ ಸಂಸದ ಸಾಮಂತಾ ಅವರು, ಪ್ರೀತಿ ಮತ್ತು ಬೆಂಬಲ ನೀಡಿದ ತಮ್ಮ ಕ್ಷೇತ್ರದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸುವ ತಮ್ಮ ನಿರ್ಧಾರ ಪ್ರಕಟಿಸಿದ ಸಾಮಂತಾ ಅವರು, ಕಳೆದ 32 ವರ್ಷಗಳಿಂದ ಮಾಡುತ್ತಿರುವ ಸಮಾಜಸೇವೆಯನ್ನು ಮುಂದುವರಿಸುವುದಾಗಿ ಮತ್ತು ಸಮಾಜ ಸೇವೆಗೆ ನನ್ನ ಬದ್ಧತೆ ಕೊನೆಯ ಉಸಿರು ಇರುವವರೆಗೂ ಮುಂದುವರಿಯುತ್ತದೆ ಎಂದು ಹೇಳಿದರು.

2024 ರ ಲೋಕಸಭಾ ಚುನಾವಣೆಯಲ್ಲಿ ಕಂಧಮಾಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಕಾಂತ ಪಾಣಿಗ್ರಾಹಿ ವಿರುದ್ಧ ಸಾಮಂತಾ ಅವರು 21,371 ಮತಗಳ ಅಂತರದಿಂದ ಸೋಲು ಅನುಭವಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT