ಹೀಟ್ ವೇವ್ ಆಘಾತ 
ದೇಶ

ವಾಯುವ್ಯ, ಪೂರ್ವ ಭಾರತಕ್ಕೆ ಮತ್ತೊಂದು Heat Wave ಆಘಾತ; ಮುಂದಿನ 5 ದಿನ ತಾಪಮಾನ ತೀವ್ರ ಏರಿಕೆ ಸಾಧ್ಯತೆ!

ಈ ಹಿಂದೆ ಉತ್ತರ ಭಾರತವನ್ನು ತತ್ತರಿಸುವಂತೆ ಮಾಡಿದ್ದ ಹೀಟ್ ವೇವ್ ಇದೀಗ ವಾಯುವ್ಯ, ಪೂರ್ವ ಭಾರತಕ್ಕೂ ಆಘಾಚ ನೀಡಿದ್ದು, ಮುಂದಿನ 5 ದಿನಗಳ ಕಾಲ ತಾಪಮಾನ ತೀವ್ರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ನವದೆಹಲಿ: ಈ ಹಿಂದೆ ಉತ್ತರ ಭಾರತವನ್ನು ತತ್ತರಿಸುವಂತೆ ಮಾಡಿದ್ದ ಹೀಟ್ ವೇವ್ ಇದೀಗ ವಾಯುವ್ಯ, ಪೂರ್ವ ಭಾರತಕ್ಕೂ ಆಘಾಚ ನೀಡಿದ್ದು, ಮುಂದಿನ 5 ದಿನಗಳ ಕಾಲ ತಾಪಮಾನ ತೀವ್ರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ವಾಯುವ್ಯ ಮತ್ತು ಪೂರ್ವ ಭಾರತದಲ್ಲಿ ತೀವ್ರತರವಾದ ಉಷ್ಣ ಅಲೆ ಬೀಸುತ್ತಿದ್ದು, ಮುಂದಿನ ಐದು ದಿನಗಳಲ್ಲಿ ತಾಪಮಾನವು ಎರಡರಿಂದ ಮೂರು ಡಿಗ್ರಿಗಳಷ್ಟು ಹೆಚ್ಚಾಗುತ್ತದೆ. ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾ ಸೇರಿದಂತೆ ಹಲವು ರಾಜ್ಯಗಳು ಉಷ್ಣ ಅಲೆ ತತ್ತರಿಸಿದ್ದು, ಇಲ್ಲಿ ಹೀಟ್ ವೇವ್ ಗೆ ಸಾಕಷ್ಟು ಸಾವುಗಳು ಸಂಭವಿಸಿದೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಭಾರತವು ಅನೇಕ ತೀವ್ರವಾದ ಮತ್ತು ದೀರ್ಘಕಾಲದ ಶಾಖದ ಅಲೆಗಳನ್ನು ಅನುಭವಿಸಿತ್ತು ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.

"ಮುಂದಿನ ಐದು ದಿನಗಳಲ್ಲಿ ವಾಯುವ್ಯ ಮತ್ತು ಪೂರ್ವ ಭಾರತದಲ್ಲಿ ಉಷ್ಣ ಅಲೆಯಿಂದ ತಾಪಮಾನ ಏರಿಕೆಯಾಗಬಹುದು. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಬಿಸಿಗಾಳಿ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT