ರಾಜನಾಥ್ ಸಿಂಗ್, ಭೂಪೇಂದರ್ ಯಾದವ್ 
ದೇಶ

ಒಡಿಶಾ ಸಿಎಂ ಆಯ್ಕೆ: ಕೇಂದ್ರ ವೀಕ್ಷಕರಾಗಿ ರಾಜನಾಥ್ ಸಿಂಗ್, ಭೂಪೇಂದರ್ ಯಾದವ್ ನೇಮಕ

ಒಡಿಶಾ ಮುಖ್ಯಮಂತ್ರಿ ನೇಮಕಕ್ಕೆ ಕೇಂದ್ರ ವೀಕ್ಷಕರಾಗಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಭೂಪೇಂದರ್ ಯಾದವ್ ಅವರನ್ನು ಬಿಜೆಪಿ ನೇಮಿಸಿದೆ. ಈ ನಿರ್ಧಾರವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅಧಿಕೃತ ಪ್ರಕಟಣೆಯಲ್ಲಿ ಪ್ರಕಟಿಸಿದ್ದಾರೆ.

ನವದೆಹಲಿ: ಒಡಿಶಾ ಮುಖ್ಯಮಂತ್ರಿ ನೇಮಕಕ್ಕೆ ಕೇಂದ್ರ ವೀಕ್ಷಕರಾಗಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಭೂಪೇಂದರ್ ಯಾದವ್ ಅವರನ್ನು ಬಿಜೆಪಿ ನೇಮಿಸಿದೆ. ಈ ನಿರ್ಧಾರವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅಧಿಕೃತ ಪ್ರಕಟಣೆಯಲ್ಲಿ ಪ್ರಕಟಿಸಿದ್ದಾರೆ.

ಒಡಿಶಾದ ಶಾಸಕಾಂಗ ಪಕ್ಷದ ಸಭೆಯ ನಾಯಕರ ಆಯ್ಕೆಗೆ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಭೂಪೇಂದರ್ ಯಾದವ್ ಅವರನ್ನು ಬಿಜೆಪಿ ಸಂಸದೀಯ ಮಂಡಳಿ ನೇಮಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಗಮನಾರ್ಹವೆಂದರೆ, ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಮತ್ತು ಭೂಪೇಂದರ್ ಯಾದವ್ ಅವರು ನೂತನ ಸರ್ಕಾರದ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ನಾಳೆ ಬಿಜೆಪಿ ಸಭೆ ಸೇರುವ ಸಾಧ್ಯತೆ ಇದೆ. ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಭುವನೇಶ್ವರದ ಜನತಾ ಮೈದಾನದಲ್ಲಿ ಬುಧವಾರ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಈ ಹಿಂದೆ, ಪಕ್ಷದ ಹಿರಿಯ ನಾಯಕ ಮತ್ತು ಸಂಸದರಾದ ಧರ್ಮೇಂದ್ರ ಪ್ರಧಾನ್ ಮತ್ತು ಜುಯಲ್ ಓರಂ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಮುಂಚೂಣಿಯಲ್ಲಿ ಪರಿಗಣಿಸಲಾಗಿತ್ತು, ಆದರೆ ನಿನ್ನೆ ಸಂಜೆ ಕೇಂದ್ರ ಸಚಿವ ಸಂಪುಟಕ್ಕೆ ಇಬ್ಬರೂ ಸೇರ್ಪಡೆಗೊಂಡ ನಂತರ ಅವರು ರೇಸ್‌ನಿಂದ ಹೊರಗುಳಿಯುತ್ತಾರೆ ಎಂದು ಹೇಳಲಾಗಿದೆ.

ಹಿರಿಯ ಶಾಸಕರಾದ ಸುರೇಶ್ ಪೂಜಾರಿ, ಕೆವಿ ಸಿಂಗ್ ದೇವ್ ಸೇರಿದಂತೆ ಹಲವು ಹೆಸರುಗಳು ಸಿಎಂ ಹುದ್ದೆಗೆ ಕೇಳಿಬರುತ್ತಿವೆ. ಆದರೆ,ಬಿಜೆಪಿ ಹೈಕಮಾಂಡ್ ಅಚ್ಚರಿಯ ವ್ಯಕ್ತಿಯನ್ನು ಆಯ್ಕೆ ಮಾಡಬಹುದು. 147 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗೆದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಬಹುಮತವನ್ನು ಗಳಿಸಿದೆ. ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ 24 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT