ಚಂದ್ರಬಾಬು ನಾಯ್ಡು - ಪವನ್ ಕಲ್ಯಾಣ್ 
ದೇಶ

ಆಂಧ್ರ ಪ್ರದೇಶ: NDA ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಜನಸೇನಾ ನಾಯಕರಾಗಿ ಪವನ್ ಕಲ್ಯಾಣ್ ಆಯ್ಕೆ

ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ವಿಧಾನಸಭೆಯ ಎನ್‌ಡಿಎ ನಾಯಕರಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಆಂಧ್ರಪ್ರದೇಶ ವಿಧಾನ ಸಭೆಯಲ್ಲಿ ಜನಸೇನಾ ಪಕ್ಷದ ನಾಯಕರನ್ನಾಗಿ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಶಾಸಕರು ಮಂಗಳವಾರ ಆಯ್ಕೆ ಮಾಡಿದ್ದಾರೆ.

ಅಮರಾವತಿ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ವಿಧಾನಸಭೆಯ ಎನ್‌ಡಿಎ ನಾಯಕರಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ.

ವಿಜಯವಾಡದಲ್ಲಿ ನಡೆದ ತೆಲುಗು ದೇಶಂ ಪಕ್ಷ, ಜನಸೇನೆ ಮತ್ತು ಬಿಜೆಪಿ ಶಾಸಕರ ಸಭೆಯಲ್ಲಿ ಎಲ್ಲ ಶಾಸಕರು ನಾಯ್ಡು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಆಂಧ್ರಪ್ರದೇಶ ಬಿಜೆಪಿ ಮುಖ್ಯಸ್ಥೆ ಡಿ ಪುರಂದೇಶ್ವರಿ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಕೂಡ ಎನ್‌ಡಿಎ ಸಭೆಯಲ್ಲಿ ಭಾಗವಹಿಸಿ ನಾಯ್ಡು ಅವರನ್ನು ಸಿಎಂ ಅಭ್ಯರ್ಥಿಯಾಗಿ ಬೆಂಬಲಿಸಿದರು.

ಇದಕ್ಕೂ ಮುನ್ನ ಬೆಳಗ್ಗೆ ನಾಯ್ಡು ಅವರು ಟಿಡಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಟಿಡಿಪಿ ನಾಯಕ ಕೆ ಅಚ್ಚೆನ್ ನಾಯ್ಡು ತಿಳಿಸಿದ್ದಾರೆ.

ಜನಸೇನಾ ಪಕ್ಷದ ನಾಯಕರಾಗಿ ಪವನ್ ಕಲ್ಯಾಣ್ ಆಯ್ಕೆ

ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಜನಸೇನಾ ಪಕ್ಷದ ನಾಯಕರನ್ನಾಗಿ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಶಾಸಕರು ಮಂಗಳವಾರ ಆಯ್ಕೆ ಮಾಡಿದ್ದಾರೆ. ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಸದನದಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವ ಎನ್‌ಡಿಎ ಶಾಸಕರ ಸಭೆಗೆ ಮುನ್ನ ಈ ಕ್ರಮ ಕೈಗೊಳ್ಳಲಾಗಿದೆ.

ತೆನಾಲಿ ಶಾಸಕ ಎನ್ ಮನೋಹರ್ ಅವರು ಪವನ್ ಕಲ್ಯಾಣ್ ಅವರ ಹೆಸರನ್ನು ವಿಧಾನಸಭೆಯ ಪಕ್ಷದ ನಾಯಕರನ್ನಾಗಿ ಪ್ರಸ್ತಾಪಿಸಿದರು. ಇದನ್ನು ಇತರ ಸದಸ್ಯರು ಸರ್ವಾನುಮತದಿಂದ ಬೆಂಬಲಿಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

175 ಸದಸ್ಯ ಬಲದ ಸದನದಲ್ಲಿ ಜನಸೇನಾ 21 ಶಾಸಕರನ್ನು ಹೊಂದಿದೆ. ಆಂಧ್ರಪ್ರದೇಶದಲ್ಲಿ 164 ವಿಧಾನಸಭೆ ಕ್ಷೇತ್ರಗಳಲ್ಲಿ ಎನ್‌ಡಿಎ (ಟಿಡಿಪಿ-135, ಜನಸೇನಾ-21 ಮತ್ತು ಬಿಜೆಪಿ-8) ಬಹುಮತದೊಂದಿಗೆ ಭರ್ಜರಿ ಜಯ ಸಾಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT