ಸುಪ್ರೀಂ ಕೋರ್ಟ್ TNIE
ದೇಶ

ಟ್ಯಾಂಕರ್ ಮಾಫಿಯಾ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಪ್ರಸನ್ನ ಬಿ ವರಾಳೆ ಅವರ ರಜಾಕಾಲದ ಪೀಠವು, ಟ್ಯಾಂಕರ್ ಮಾಫಿಯಾವನ್ನು ನಿಭಾಯಿಸಲು ದೆಹಲಿ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಈ ವಿಷಯದಲ್ಲಿ ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರಿಗೆ ಸೂಚಿಸುತ್ತೇವೆ ಎಂದಿದೆ.

ನವದೆಹಲಿ: ನಗರದಲ್ಲಿ ಟ್ಯಾಂಕರ್ ಮಾಫಿಯಾ ಮತ್ತು ನೀರು ಪೋಲು ಮಾಡುತ್ತಿರುವ ಬಗ್ಗೆ ದೆಹಲಿ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಅವರ ವಿರುದ್ಧ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಳಿದೆ.

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಪ್ರಸನ್ನ ಬಿ ವರಾಳೆ ಅವರ ರಜಾಕಾಲದ ಪೀಠವು, ಟ್ಯಾಂಕರ್ ಮಾಫಿಯಾವನ್ನು ನಿಭಾಯಿಸಲು ದೆಹಲಿ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಈ ವಿಷಯದಲ್ಲಿ ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರಿಗೆ ಸೂಚಿಸುತ್ತೇವೆ ಎಂದಿದೆ.

'ನ್ಯಾಯಾಲಯದ ಮುಂದೆ ಏಕೆ ಸುಳ್ಳು ಹೇಳಿಕೆಗಳನ್ನು ನೀಡಲಾಯಿತು? ಹಿಮಾಚಲ ಪ್ರದೇಶದಿಂದ ನೀರು ಬರುತ್ತಿದೆ ಹಾಗಾದರೆ ದೆಹಲಿಯಲ್ಲಿ ನೀರು ಎಲ್ಲಿಗೆ ಹೋಗುತ್ತಿದೆ? ಇಷ್ಟೊಂದು ಪೋಲು, ಟ್ಯಾಂಕರ್ ಮಾಫಿಯಾಗಳು ಇತ್ಯಾದಿ ಈ ಬಗ್ಗೆ ನೀವು ಏನು ಕ್ರಮ ಕೈಗೊಂಡಿದ್ದೀರಿ?' ಎಂದು ಪೀಠ ಪ್ರಶ್ನಿಸಿದೆ.

ಜನರು ತೊಂದರೆ ಅನುಭವಿಸುತ್ತಿದ್ದಾರೆ, ನಾವು ಪ್ರತಿ ಸುದ್ದಿ ವಾಹಿನಿಗಳಲ್ಲಿಯೂ ಈ ದೃಶ್ಯಗಳನ್ನು ನೋಡುತ್ತಿದ್ದೇವೆ. ಪ್ರತಿ ಬಾರಿಯೂ ಬೇಸಿಗೆಯಲ್ಲಿ ನೀರಿನ ಕೊರತೆಯು ಉಲ್ಬಣಿಸುತ್ತಲೇ ಇದ್ದರೆ ನೀರು ವ್ಯರ್ಥವಾಗುವುದನ್ನು ನಿಯಂತ್ರಿಸಲು ನೀವು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ' ಎಂದು ಪೀಠವು ದೆಹಲಿ ಸರ್ಕಾರವನ್ನು ಪ್ರಶ್ನಿಸಿದೆ.

ದೆಹಲಿ ಸರ್ಕಾರದ ಪರ ವಾದ ಮಂಡಿಸಿದ ವಕೀಲ ಶದನ್ ಫರಾಸತ್, ನೀರನ್ನು ಪೋಲು ಮಾಡುವವರಿಗೆ ನೀರು ಸರಬರಾಜನ್ನು ಕಡಿತಗೊಳಿಸುವ ಮೂಲಕ ಹೆಚ್ಚುವರಿ ನೀರು ವ್ಯರ್ಥವಾಗುವುದನ್ನು ತಡೆಯಲು ಸರ್ಕಾರವು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದರು.

ನೀರು ಪೋಲಾಗುವುದನ್ನು ತಡೆಯಲು ಕೈಗೊಂಡ ಕ್ರಮಗಳ ಕುರಿತು ಸಮಗ್ರ ವರದಿಯನ್ನು ಸಲ್ಲಿಸುವಂತೆ ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಸಂಬಂಧ ಗುರುವಾರ ಮುಂದಿನ ವಿಚಾರಣೆ ನಡೆಯಲಿದೆ.

ರಾಷ್ಟ್ರ ರಾಜಧಾನಿಯಲ್ಲಿ ತಲೆದೋರಿರುವ ನೀರಿನ ಬಿಕ್ಕಟ್ಟನ್ನು ತಗ್ಗಿಸಲು ಹಿಮಾಚಲ ಪ್ರದೇಶ ಒದಗಿಸಿದ ಹೆಚ್ಚುವರಿ ನೀರನ್ನು ದೆಹಲಿಗೆ ಬಿಡುಗಡೆ ಮಾಡಲು ಹರಿಯಾಣಕ್ಕೆ ನಿರ್ದೇಶನ ನೀಡುವಂತೆ ದೆಹಲಿ ಸರ್ಕಾರ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

Video: 'ಪ್ರಾಕ್ಟಿಸ್ ಮಾಡೋಕ್ ಬಿಡ್ರೋ..': ಕ್ಯಾಮೆರಾಮನ್ ವಿರುದ್ಧ Smriti Mandhana ಅಸಮಾಧಾನ

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!

SCROLL FOR NEXT