ದೇಶ

ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯದ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಬಿಜೆಪಿ ಸರ್ಕಾರ!

ಒಡಿಶಾದ ಬಿಜೆಪಿ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಭುವನೇಶ್ವರ್: ಒಡಿಶಾದ ಬಿಜೆಪಿ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಪುನಃ ತೆರೆಯುವ ನಿರ್ಧಾರ ಇದಾಗಿದ್ದು, ಗುರುವಾರ ಬೆಳಿಗ್ಗೆಯಿಂದ ಜಾರಿಗೆ ಬಂದಿದೆ. ಇದಷ್ಟೇ ಅಲ್ಲದೇ ದೇವಾಲಯಕ್ಕೆ ಅಗತ್ಯವಿರುವ ಸಂಗ್ರಹ ನಿಧಿಯನ್ನು ಸ್ಥಾಪಿಸುವುದಕ್ಕೂ ಸಚಿವ ಸಂಪುಟ ಅನುಮೋದನೆ ನೀಡಿದೆ.

ಭಕ್ತಾದಿಗಳು ಇನ್ನು ಮುಂದೆ ಎಲ್ಲಾ ನಾಲ್ಕು ದ್ವಾರಗಳ ಮೂಲಕ ಪುರಿ ಜಗನ್ನಾಥನ ದರ್ಶನ ಪಡೆಯಬಹುದಾಗಿದೆ ಎಂದು ಸಿಎಂ ಮೋಹನ್ ಚರಣ್ ಮಾಜ್ಹಿ ಹೇಳಿದ್ದಾರೆ. ದೇವಾಲಯದ ನಾಲ್ಕೂ ದ್ವಾರಗಳನ್ನು ತೆರೆಯುವುದು ಬಿಜೆಪಿ ಪ್ರಣಾಳಿಕೆಯ ಅಂಶವಾಗಿತ್ತು. ಗೇಟ್ ಗಳನ್ನು ಮುಚ್ಚಿದ್ದರಿಂದ ಭಕ್ತಾದಿಗಳಿಗೆ ಅನನುಕೂಲವಾಗಿತ್ತು.

ಹಿಂದಿನ BJD ಆಡಳಿತವು COVID-19 ಸಾಂಕ್ರಾಮಿಕ ರೋಗದಿಂದ ದೇವಾಲಯದ ನಾಲ್ಕು ದ್ವಾರಗಳನ್ನು ಮುಚ್ಚುವುದನ್ನು ಮುಂದುವರೆಸಿತ್ತು. ಭಕ್ತರು ಒಂದು ಗೇಟ್ ಮೂಲಕ ಮಾತ್ರ ಪ್ರವೇಶಿಸಬಹುದಾಗಿತ್ತು. ಅನನುಕೂಲವಾಗುತ್ತಿದ್ದ ಕಾರಣ ಎಲ್ಲಾ ದ್ವಾರಗಳನ್ನು ತೆರೆಯಬೇಕು ಎಂಬ ಒತ್ತಾಯ ಕೇಳಿಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ