ಸಾಂದರ್ಭಿಕ ಚಿತ್ರ 
ದೇಶ

ಕುವೈತ್‌ ಅಗ್ನಿ ದುರಂತ: ಭಾರತೀಯರ ಮೃತದೇಹ ತರಲು C-130J ವಿಮಾನ ಕಳುಹಿಸಿದ ಕೇಂದ್ರ

ಭೀಕರ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ 40ಕ್ಕೂ ಹೆಚ್ಚು ಭಾರತೀಯರ ಮೃತದೇಹಗಳನ್ನು ಮರಳಿ ದೇಶಕ್ಕೆ ತರಲು ಭಾರತ ಗುರುವಾರ ರಾತ್ರಿ ಕುವೈತ್‌ಗೆ ಮಿಲಿಟರಿ ಸಾರಿಗೆ ವಿಮಾನವನ್ನು ಕಳುಹಿಸುತ್ತಿದೆ.

ನವದೆಹಲಿ: ದಕ್ಷಿಣ ಕುವೈತ್‌ನ ವಿದೇಶಿ ಕಾರ್ಮಿಕರ ವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ 40ಕ್ಕೂ ಹೆಚ್ಚು ಭಾರತೀಯರ ಮೃತದೇಹಗಳನ್ನು ಮರಳಿ ದೇಶಕ್ಕೆ ತರಲು ಭಾರತ ಗುರುವಾರ ರಾತ್ರಿ ಕುವೈತ್‌ಗೆ ಮಿಲಿಟರಿ ಸಾರಿಗೆ ವಿಮಾನವನ್ನು ಕಳುಹಿಸುತ್ತಿದೆ.

ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರು ಮತ್ತು ಮೂವರು ಫಿಲಿಪಿನೋ ಪ್ರಜೆಗಳ ಶವಗಳನ್ನು ಗುರುತಿಸಿರುವುದಾಗಿ ಕುವೈತ್ ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಅವಘಡದಲ್ಲಿ ಕನಿಷ್ಠ 49 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 50 ಮಂದಿ ಗಾಯಗೊಂಡಿದ್ದಾರೆ.

ಭಾರತೀಯ ವಾಯುಪಡೆಯ C-130J ಸಾರಿಗೆ ವಿಮಾನ ಇಂದು ರಾತ್ರಿ ಕುವೈತ್ ಗೆ ತೆರಳುತ್ತಿದ್ದು, ಶುಕ್ರವಾರ ಮೃತದೇಹಗಳನ್ನು ಮರಳಿ ದೇಶಕ್ಕೆ ತರಲಿದೆ. ಮೃತ ಭಾರತೀಯರಲ್ಲಿ ಹೆಚ್ಚಿನವರು ಕೇರಳದವರಾಗಿರುವುದರಿಂದ ವಿಮಾನ ಮೊದಲು ಕೊಚ್ಚಿಯಲ್ಲಿ ಲ್ಯಾಂಡ್ ಆಗಲಿದೆ ಎಂದು ದೆಹಲಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ಕೆಲವರು ಉತ್ತರ ಭಾರತದವರಿದ್ದು, ವಿಮಾನವು ಕೊಚ್ಚಿಯಿಂದ ದೆಹಲಿಯನ್ನು ತಲುಪುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

"ಎಲೆಕ್ಟ್ರಿಕಲ್ ಸರ್ಕ್ಯೂಟ್" ನಿಂದ ಈ ಭೀಕರ ಅಗ್ನಿ ಅವಘಡ ಸಂಭವಿಸಿದೆ ಎಂದು ಕುವೈತ್ ಅಗ್ನಿಶಾಮಕ ದಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT