ಸಾಂದರ್ಭಿಕ ಚಿತ್ರ 
ದೇಶ

ಕುವೈತ್‌ ಅಗ್ನಿ ದುರಂತ: ಭಾರತೀಯರ ಮೃತದೇಹ ತರಲು C-130J ವಿಮಾನ ಕಳುಹಿಸಿದ ಕೇಂದ್ರ

ಭೀಕರ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ 40ಕ್ಕೂ ಹೆಚ್ಚು ಭಾರತೀಯರ ಮೃತದೇಹಗಳನ್ನು ಮರಳಿ ದೇಶಕ್ಕೆ ತರಲು ಭಾರತ ಗುರುವಾರ ರಾತ್ರಿ ಕುವೈತ್‌ಗೆ ಮಿಲಿಟರಿ ಸಾರಿಗೆ ವಿಮಾನವನ್ನು ಕಳುಹಿಸುತ್ತಿದೆ.

ನವದೆಹಲಿ: ದಕ್ಷಿಣ ಕುವೈತ್‌ನ ವಿದೇಶಿ ಕಾರ್ಮಿಕರ ವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ 40ಕ್ಕೂ ಹೆಚ್ಚು ಭಾರತೀಯರ ಮೃತದೇಹಗಳನ್ನು ಮರಳಿ ದೇಶಕ್ಕೆ ತರಲು ಭಾರತ ಗುರುವಾರ ರಾತ್ರಿ ಕುವೈತ್‌ಗೆ ಮಿಲಿಟರಿ ಸಾರಿಗೆ ವಿಮಾನವನ್ನು ಕಳುಹಿಸುತ್ತಿದೆ.

ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರು ಮತ್ತು ಮೂವರು ಫಿಲಿಪಿನೋ ಪ್ರಜೆಗಳ ಶವಗಳನ್ನು ಗುರುತಿಸಿರುವುದಾಗಿ ಕುವೈತ್ ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಅವಘಡದಲ್ಲಿ ಕನಿಷ್ಠ 49 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 50 ಮಂದಿ ಗಾಯಗೊಂಡಿದ್ದಾರೆ.

ಭಾರತೀಯ ವಾಯುಪಡೆಯ C-130J ಸಾರಿಗೆ ವಿಮಾನ ಇಂದು ರಾತ್ರಿ ಕುವೈತ್ ಗೆ ತೆರಳುತ್ತಿದ್ದು, ಶುಕ್ರವಾರ ಮೃತದೇಹಗಳನ್ನು ಮರಳಿ ದೇಶಕ್ಕೆ ತರಲಿದೆ. ಮೃತ ಭಾರತೀಯರಲ್ಲಿ ಹೆಚ್ಚಿನವರು ಕೇರಳದವರಾಗಿರುವುದರಿಂದ ವಿಮಾನ ಮೊದಲು ಕೊಚ್ಚಿಯಲ್ಲಿ ಲ್ಯಾಂಡ್ ಆಗಲಿದೆ ಎಂದು ದೆಹಲಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ಕೆಲವರು ಉತ್ತರ ಭಾರತದವರಿದ್ದು, ವಿಮಾನವು ಕೊಚ್ಚಿಯಿಂದ ದೆಹಲಿಯನ್ನು ತಲುಪುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

"ಎಲೆಕ್ಟ್ರಿಕಲ್ ಸರ್ಕ್ಯೂಟ್" ನಿಂದ ಈ ಭೀಕರ ಅಗ್ನಿ ಅವಘಡ ಸಂಭವಿಸಿದೆ ಎಂದು ಕುವೈತ್ ಅಗ್ನಿಶಾಮಕ ದಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT