ಧರ್ಮೇಂದ್ರ ಪ್ರಧಾನ್ 
ದೇಶ

ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಾಕ್ಷ್ಯಗಳಿಲ್ಲ: NEET-UG ಫಲಿತಾಂಶದ ವಿವಾದದ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕ್ಷ್ಯಗಳಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕ್ಷ್ಯಗಳಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ 1,563 ನೀಟ್-ಯುಜಿ 2024 ಅಭ್ಯರ್ಥಿಗಳಿಗೆ ಕೃಪಾಂಕಗಳನ್ನು ನೀಡುವ ನಿರ್ಧಾರವನ್ನು ಹಿಂಪಡೆಯಲಾಗಿದೆ ಮತ್ತು ಈ ವಿದ್ಯಾರ್ಥಿಗಳು ಜೂನ್ 23 ರಂದು ಮರು ಪರೀಕ್ಷೆಯನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಬೆನ್ನಲ್ಲೇ ಪ್ರಧಾನ್ ಈ ಹೇಳಿಕೆ ನೀಡಿದ್ದಾರೆ. ಆದರೆ, ಸುಪ್ರೀಂ ಕೋರ್ಟ್, ಪ್ರವೇಶಾತಿ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡಿಲ್ಲ.

ಎನ್ ಟಿಎ ನಲ್ಲಿ ಕಾರ್ಯಕ್ಷಮತೆಯ ಕೊರತೆ ಹಾಗೂ ಭ್ರಷ್ಟಾಚಾರ ನಡೆದಿರುವುದನ್ನು ತಳ್ಳಿಹಾಕಿರುವ ಧರ್ಮೇಂದ್ರ ಪ್ರಧಾನ್, ''ನೀಟ್-ಯುಜಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಎನ್ ಟಿಎಯಲ್ಲಿನ ಭ್ರಷ್ಟಾಚಾರದ ಆರೋಪಗಳು ಆಧಾರರಹಿತವಾಗಿವೆ; ಇದು ಅತ್ಯಂತ ವಿಶ್ವಾಸಾರ್ಹ ಸಂಸ್ಥೆಯಾಗಿದೆ ಯಾವುದೇ ಅದಕ್ಷತೆ ಇಲ್ಲ ಎಂದು ಹೇಳಿದ್ದಾರೆ.

“ಎನ್‌ಟಿಎ ದೇಶದಲ್ಲಿ ಎನ್ಇಇಟಿ, ಜೆಇಇ ಮತ್ತು ಸಿಯುಇಟಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುತ್ತದೆ. ಆದರೆ ಈಗ ನಡೆದಿರುವ ಲೋಪಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ವಿದ್ಯಾರ್ಥಿಗೆ ಅನಾನುಕೂಲವಾಗದಿರುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ, ”ಎಂದು ಪ್ರಧಾನ್ ಹೇಳಿದ್ದಾರೆ.

ಎನ್ಇಇಟಿ ಪರೀಕ್ಷೆಗೆ ಸಂಬಂಧಿಸಿದಂತೆ 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ಸಮಸ್ಯೆ ಸುಮಾರು 1,500 ವಿದ್ಯಾರ್ಥಿಗಳಿಗೆ ಸಂಬಂಧಿಸಿದೆ. ನ್ಯಾಯಾಲಯಕ್ಕೆ ಉತ್ತರ ನೀಡಲು ಸರಕಾರ ಸಿದ್ಧವಿದೆ,’’ ಎಂದು ಪ್ರಧಾನ್ ಹೇಳಿದ್ದಾರೆ.

“ಕೆಲವು ದೊಡ್ಡ ಪ್ರಶ್ನೆಗಳನ್ನು ಎತ್ತಲಾಗಿದೆ; ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಸಿದ್ಧವಿದೆ. ನಿರ್ದಿಷ್ಟ ಘಟನೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಇದಕ್ಕೆ ಕಾರಣರಾದವರಿಗೆ ಖಂಡಿತ ಶಿಕ್ಷೆಯಾಗುತ್ತದೆ. ಎಲ್ಲಾ ಪಾರದರ್ಶಕತೆಯೊಂದಿಗೆ ವಿದ್ಯಾರ್ಥಿಗಳಿಗೆ ನ್ಯಾಯವನ್ನು ನೀಡಲು ಭಾರತ ಸರ್ಕಾರ ಮತ್ತು ಎನ್‌ಟಿಎ ಬದ್ಧವಾಗಿದೆ ಎಂದು ನಾನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಭರವಸೆ ನೀಡುತ್ತೇನೆ. ಯಾವುದೇ ಪೇಪರ್ ಸೋರಿಕೆಯಾಗಿಲ್ಲ ಎಂದು ಸಚಿವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ 1500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನೀಡಿರುವ ಗ್ರೇಸ್ ಮಾರ್ಕ್ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ತಜ್ಞರ ಸಮಿತಿ ರಚಿಸಲಾಗಿದೆ. "1,563 ಅಭ್ಯರ್ಥಿಗಳಲ್ಲಿ, ಮರು-ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸದಿದ್ದರೆ, ಅವರ ಹಿಂದಿನ ಅಂಕಗಳು, ಗ್ರೇಸ್ ಅಂಕಗಳನ್ನು ಹೊರತುಪಡಿಸಿ, ಫಲಿತಾಂಶದ ಉದ್ದೇಶಗಳಿಗಾಗಿ ನೀಡಲಾಗುತ್ತದೆ" ಎಂದು ಅವರು ಹೇಳಿದ್ದಾರೆ.

ಮರು ಪರೀಕ್ಷೆಯ ಫಲಿತಾಂಶವನ್ನು ಜೂನ್ 30 ರಂದು ಪ್ರಕಟಿಸಲಾಗುವುದು ಮತ್ತು ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಜುಲೈ 6 ರಂದು ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

SCROLL FOR NEXT