ಇಂದ್ರೇಶ್ ಕುಮಾರ್ 
ದೇಶ

ದುರಹಂಕಾರ ಪಟ್ಟವರನ್ನು ಶ್ರೀರಾಮನೇ 240 ಸೀಟುಗಳಿಗೆ ತಡೆದ: RSS ನಾಯಕ ಇಂದ್ರೇಶ್ ಕುಮಾರ್ ವಾಗ್ದಾಳಿ

ಲೋಕಸಭಾ ಚುನಾವಣೆಯ ಫಲಿತಾಂಶಗಳ ನಂತರ ಆರೆಸ್ಸೆಸ್‌ ನಾಯಕ ಇಂದ್ರೇಶ್‌ ಕುಮಾರ್ ಆಡಳಿತ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ ಹಾಗೂ ʼಅಹಂಕಾರʼಕ್ಕಾಗಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೈಪುರ: ಲೋಕಸಭಾ ಚುನಾವಣೆಯ ಫಲಿತಾಂಶಗಳ ನಂತರ ಆರೆಸ್ಸೆಸ್‌ ನಾಯಕ ಇಂದ್ರೇಶ್‌ ಕುಮಾರ್ ಆಡಳಿತ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ ಹಾಗೂ ʼಅಹಂಕಾರʼಕ್ಕಾಗಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದೇ ಸಮಯ “ರಾಮ-ವಿರೋಧಿ” ಆಗಿದ್ದಕ್ಕೆ ಇಂಡಿಯಾ ಮೈತ್ರಿಕೂಟವನ್ನು ಅವರು ಟೀಕಿಸಿದ್ದಾರೆ.

ಜೈಪುರದ ಸಮೀಪದ ಕನೋಟಾ ಎಂಬಲ್ಲಿ ರಾಮರಥ ಅಯೋಧ್ಯೆ ಯಾತ್ರಾ ದರ್ಶನ್‌ ಪೂಜಾ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಭಕ್ತಿಯನ್ನು ಮೆರೆದರೂ ಅಹಂಕಾರಿಯಾದ ಪಕ್ಷವನ್ನು 241ಕ್ಕೆ ತಡೆಯಲಾಯಿತು. ಆದರೆ ಅದನ್ನು ಅತ್ಯಂತ ದೊಡ್ಡ ಪಕ್ಷವನ್ನಾಗಿಸಲಾಯಿತು ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ರಾಮನ ಮೇಲೆ ಭಕ್ತಿ ಇಲ್ಲದವರನ್ನು ಜೊತೆಯಾಗಿ 234 ಕ್ಕೆ ನಿಲ್ಲಿಸಲಾಯಿತು ಎಂದು ಇಂಡಿಯಾ ಮೈತ್ರಿಕೂಟವನ್ನು ಪರೋಕ್ಷವಾಗಿ ಇಂದ್ರೇಶ್‌ ಕುಮಾರ್‌ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ರಾಮ ರಾಜ್ಯದ ವಿಧಾನವನ್ನು ನೋಡಿ. ಯಾರು ರಾಮನ ಮೇಲೆ ಭಕ್ತಿ ತೋರಿಸಿ ನಂತರ ಅಹಂಕಾರಿಯಾದರು, ಆ ಪಕ್ಷ ಅತ್ಯಂತ ದೊಡ್ಡ ಪಕ್ಷವಾಯಿತು, ಆದರೆ ನೀಡಬೇಕಾಗಿದ್ದ ಮತ ಮತ್ತು ಶಕ್ತಿಯನ್ನು ಅವರ ಅಹಂಕಾರದ ಕಾರಣ ದೇವರು ತಡೆದರುಎಂದು ಅವರು ಹೇಳಿದರು.

ರಾಮನನ್ನು ವಿರೋಧಿಸಿದವರಲ್ಲಿ ಯಾರಿಗೂ ಅಧಿಕಾರ ಸಿಕ್ಕಿಲ್ಲ. ಎಲ್ಲರೂ ಜೊತೆಯಾಗಿದ್ದರೂ ಎರಡನೇ ಸ್ಥಾನ ದೊರೆಯಿತು. ದೇವರ ನ್ಯಾಯ ನಿಜ ಮತ್ತು ಆನಂದದಾಯಕ ಎಂದು ಅವರು ಹೇಳಿದರು. ರಾಮನನ್ನು ಆರಾಧಿಸುವವರು ವಿನೀತರಾಗಿರಬೇಕು ಮತ್ತು ರಾಮನನ್ನು ವಿರೋಧಿಸಿದವರನ್ನು ರಾಮನೇ ನೋಡಿಕೊಂಡ ಎಂದು ಅವರು ಹೇಳಿದರು. ಶ್ರೀರಾಮ ದೇವರು ಯಾರಿಗೂ ನೋವುಂಟು ಮಾಡುವುದಿಲ್ಲ, ಎಲ್ಲರಿಗೂ ನ್ಯಾಯ ಒದಗಿಸುತ್ತಾರೆ. ಶ್ರೀ ರಾಮ ಯಾವತ್ತೂ ನ್ಯಾಯದ ಪರ ಆಗಿರುತ್ತಾರೆ ಎಂದು ಇಂದ್ರೇಶ್‌ ಕುಮಾರ್‌ ಹೇಳಿದರು.

ನಿಜವಾದ ಸೇವಕ ಜನರ ಸೇವೆಯನ್ನು ಅಹಂಕಾರವಿಲ್ಲದೆ ಮಾಡಬೇಕು ಮತ್ತು ಘನತೆ ಕಾಪಾಡಬೇಕು ಎಂದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಇತ್ತೀಚೆಗೆ ಹೇಳಿದ ಬೆನ್ನಲ್ಲೇ ಇಂದ್ರೇಶ್‌ ಕುಮಾರ್‌ ಅವರ ಹೇಳಿಕೆ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT