ಅಮಿತ್ ಶಾ 
ದೇಶ

ಜಮ್ಮು-ಕಾಶ್ಮೀರ ಭದ್ರತೆ ಪರಿಶೀಲಿಸಿದ ಗೃಹ ಸಚಿವ ಅಮಿತ್ ಶಾ; ಜೂನ್ 16 ರಂದು ಉನ್ನತ ಮಟ್ಟದ ಸಭೆ

ಯಾತ್ರಿಗಳಿದ್ದ ಬಸ್ ಮೇಲಿನ ಗುಂಡಿನ ದಾಳಿ ಸೇರಿದಂತೆ ಹಲವು ಉಗ್ರರ ಘಟನೆಗಳಿಗೆ ಸಾಕ್ಷಿಯಾದ ಜಮ್ಮು-ಕಾಶ್ಮೀರದಲ್ಲಿನ ಭದ್ರತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪರಿಶೀಲಿಸಿದರು ಎಂದು ಮೂಲಗಳು ಹೇಳಿವೆ.

ನವದೆಹಲಿ: ಯಾತ್ರಿಗಳಿದ್ದ ಬಸ್ ಮೇಲಿನ ಗುಂಡಿನ ದಾಳಿ ಸೇರಿದಂತೆ ಹಲವು ಉಗ್ರರ ಘಟನೆಗಳಿಗೆ ಸಾಕ್ಷಿಯಾದ ಜಮ್ಮು-ಕಾಶ್ಮೀರದಲ್ಲಿನ ಭದ್ರತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪರಿಶೀಲಿಸಿದರು ಎಂದು ಮೂಲಗಳು ಹೇಳಿವೆ.

ಜೂನ್ 16 ರಂದು ಉನ್ನತ ಮಟ್ಟದ ಸಭೆ ಕರೆದಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನೆ ಹಾಗೂ ಸಿಆರ್ ಪಿಎಫ್ ನ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಾನುವಾರದ ಸಭೆಯಲ್ಲಿ,ಜೂನ್ 29 ರಂದು ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಯ ಸಿದ್ಧತೆಗಳನ್ನು ಸಹ ಅಮಿತ್ ಶಾ ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸದ್ಯ ಇರುವ ಪರಿಸ್ಥಿತಿ ಮತ್ತು ಭಯೋತ್ಪಾದನಾ ಘಟನೆಗಳ ಬಳಿಕ ತೆಗೆದುಕೊಂಡ ಕ್ರಮಗಳ ಬಗ್ಗೆ ಗೃಹ ಸಚಿವರಿಗೆ ವಿವರಿಸಲಾಗಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಭಯೋತ್ಪಾದಕರು ದಾಳಿ ನಡೆಸಿದ್ದು, ಒಂಬತ್ತು ಯಾತ್ರಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ ಮತ್ತು ಏಳು ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಭಾನುವಾರದ ಸಭೆಯಲ್ಲಿ, ಜೂನ್ 29 ರಂದು ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಯ ಸಿದ್ಧತೆಗಳನ್ನು ಸಹ ಅಮಿತ್ ಶಾ ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸದ್ಯ ಇರುವ ಪರಿಸ್ಥಿತಿ ಮತ್ತು ಭಯೋತ್ಪಾದನಾ ಘಟನೆಗಳ ಬಳಿಕ ತೆಗೆದುಕೊಂಡ ಕ್ರಮಗಳ ಬಗ್ಗೆ ಗೃಹ ಸಚಿವರಿಗೆ ವಿವರಿಸಲಾಗಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಭಯೋತ್ಪಾದಕರು ದಾಳಿ ನಡೆಸಿದ್ದು, ಒಂಬತ್ತು ಯಾತ್ರಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ ಮತ್ತು ಏಳು ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ