ಅಮಿತ್ ಶಾ 
ದೇಶ

ಜಮ್ಮು-ಕಾಶ್ಮೀರ ಭದ್ರತೆ ಪರಿಶೀಲಿಸಿದ ಗೃಹ ಸಚಿವ ಅಮಿತ್ ಶಾ; ಜೂನ್ 16 ರಂದು ಉನ್ನತ ಮಟ್ಟದ ಸಭೆ

ಯಾತ್ರಿಗಳಿದ್ದ ಬಸ್ ಮೇಲಿನ ಗುಂಡಿನ ದಾಳಿ ಸೇರಿದಂತೆ ಹಲವು ಉಗ್ರರ ಘಟನೆಗಳಿಗೆ ಸಾಕ್ಷಿಯಾದ ಜಮ್ಮು-ಕಾಶ್ಮೀರದಲ್ಲಿನ ಭದ್ರತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪರಿಶೀಲಿಸಿದರು ಎಂದು ಮೂಲಗಳು ಹೇಳಿವೆ.

ನವದೆಹಲಿ: ಯಾತ್ರಿಗಳಿದ್ದ ಬಸ್ ಮೇಲಿನ ಗುಂಡಿನ ದಾಳಿ ಸೇರಿದಂತೆ ಹಲವು ಉಗ್ರರ ಘಟನೆಗಳಿಗೆ ಸಾಕ್ಷಿಯಾದ ಜಮ್ಮು-ಕಾಶ್ಮೀರದಲ್ಲಿನ ಭದ್ರತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪರಿಶೀಲಿಸಿದರು ಎಂದು ಮೂಲಗಳು ಹೇಳಿವೆ.

ಜೂನ್ 16 ರಂದು ಉನ್ನತ ಮಟ್ಟದ ಸಭೆ ಕರೆದಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನೆ ಹಾಗೂ ಸಿಆರ್ ಪಿಎಫ್ ನ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಾನುವಾರದ ಸಭೆಯಲ್ಲಿ,ಜೂನ್ 29 ರಂದು ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಯ ಸಿದ್ಧತೆಗಳನ್ನು ಸಹ ಅಮಿತ್ ಶಾ ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸದ್ಯ ಇರುವ ಪರಿಸ್ಥಿತಿ ಮತ್ತು ಭಯೋತ್ಪಾದನಾ ಘಟನೆಗಳ ಬಳಿಕ ತೆಗೆದುಕೊಂಡ ಕ್ರಮಗಳ ಬಗ್ಗೆ ಗೃಹ ಸಚಿವರಿಗೆ ವಿವರಿಸಲಾಗಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಭಯೋತ್ಪಾದಕರು ದಾಳಿ ನಡೆಸಿದ್ದು, ಒಂಬತ್ತು ಯಾತ್ರಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ ಮತ್ತು ಏಳು ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಭಾನುವಾರದ ಸಭೆಯಲ್ಲಿ, ಜೂನ್ 29 ರಂದು ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಯ ಸಿದ್ಧತೆಗಳನ್ನು ಸಹ ಅಮಿತ್ ಶಾ ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸದ್ಯ ಇರುವ ಪರಿಸ್ಥಿತಿ ಮತ್ತು ಭಯೋತ್ಪಾದನಾ ಘಟನೆಗಳ ಬಳಿಕ ತೆಗೆದುಕೊಂಡ ಕ್ರಮಗಳ ಬಗ್ಗೆ ಗೃಹ ಸಚಿವರಿಗೆ ವಿವರಿಸಲಾಗಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಭಯೋತ್ಪಾದಕರು ದಾಳಿ ನಡೆಸಿದ್ದು, ಒಂಬತ್ತು ಯಾತ್ರಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ ಮತ್ತು ಏಳು ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT