ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕುವೈತ್ ಬೆಂಕಿಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ಹೊತ್ತೊಯ್ದು ತಂದ ಶವಪೆಟ್ಟಿಗೆಗೆ ಹೂವಿನ ಹಾರ ಹಾಕಿ ಗೌರವಿಸಿದರು.  
ದೇಶ

ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಿಂದ ಕುವೈತ್ ನಿಂದ ಮೃತದೇಹಗಳನ್ನು ತರಲು ಸಾಧ್ಯವಾಯಿತು: ಕೇರಳ ಸಿಎಂ ಪಿಣರಾಯಿ ವಿಜಯನ್

ಕುವೈತ್‌ನಲ್ಲಿ ಅಗ್ನಿ ಅವಘಡದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಇಂದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಕೊಚ್ಚಿ: ಕುವೈತ್‌ನಲ್ಲಿ ಅಗ್ನಿ ಅವಘಡದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಇಂದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಇಂದು ಬೆಳಗ್ಗೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು.

ಗುರುವಾರ ಕುವೈತ್‌ಗೆ ಧಾವಿಸಿದ ಕೇಂದ್ರ ರಾಜ್ಯ ಸಚಿವ ಸಿಂಗ್ ವಿಕೆ ಸಿಂಗ್ ಮೃತದೇಹಗಳನ್ನು ಹೊತ್ತ ವಿಮಾನದಲ್ಲಿ ಆಗಮಿಸಿದರು. ಕೇಂದ್ರ ಸಚಿವ ಸುರೇಶ್ ಗೋಪಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವರು ವಿಮಾನ ನಿಲ್ದಾಣದಲ್ಲಿ ಭಾವಪೂರ್ಣವಾಗಿ ಬರಮಾಡಿಕೊಂಡರು. ಸಚಿವರಾದ ವೀಣಾ ಜಾರ್ಜ್, ಪಿ ರಾಜೀವ್, ಕೆ ರಾಜನ್ ಮತ್ತು ರೋಶಿ ಆಗಸ್ಟಿನ್ ಕೂಡ ಪಾರ್ಥಿವ ಶರೀರವನ್ನು ಸ್ವೀಕರಿಸಲು ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

ಕುಟುಂಬಸ್ಥರಿಗೆ ಹಸ್ತಾಂತರಿಸಿದ ನಂತರ ಮಾತನಾಡಿದ ಸಿಎಂ ಪಿಣರಾಯಿ ವಿಜಯನ್, ಮೃತಪಟ್ಟ ಭಾರತೀಯರ ಮೃತಶರೀರಗಳನ್ನು ತರೆತರಲು ಭಾರತ ಸರ್ಕಾರ ಮತ್ತು ಕುವೈತ್‌ನ ಮಧ್ಯಸ್ಥಿಕೆ ಸಹಾಯ ಮಾಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಮೃತಪಟ್ಟವರ ಕುಟುಂಬಗಳಿಗೆ ಇದು ತುಂಬಲಾರದ ನಷ್ಟವಾಗಿದೆ. ಕುವೈತ್ ಸರ್ಕಾರವು ಪರಿಣಾಮಕಾರಿ ಮತ್ತು ನಿಷ್ಪಾಪ ಕ್ರಮಗಳನ್ನು ತೆಗೆದುಕೊಂಡಿದೆ, ದುರಂತದ ಬಗ್ಗೆ ತಿಳಿದಾಗ, ಭಾರತ ಸರ್ಕಾರವೂ ಸರಿಯಾದ ಸಮಯದಲ್ಲಿ ಸೂಕ್ತ ಕ್ರಮ ಕೈಗೊಂಡಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT