ಪಾರ್ಥಿವ ಶರೀರವನ್ನು ವೇದಿಕೆಗಳಲ್ಲಿ ಇರಿಸಲಾಗಿದ್ದು, ಅಲ್ಲಿ ಸಚಿವರು ಮತ್ತು ಇತರರು ಗೌರವ ಸಲ್ಲಿಸಲಿದ್ದಾರೆ. 
ದೇಶ

ಕುವೈತ್ ಅಗ್ನಿ ದುರಂತ: ಕೊಚ್ಚಿ ವಿಮಾನ ನಿಲ್ದಾಣಕ್ಕೆ 45 ಭಾರತೀಯರ ಮೃತದೇಹ ಆಗಮನ; ಕುಟುಂಬಸ್ಥರು, ಗಣ್ಯರಿಂದ ಭಾವಪೂರ್ಣ ಕಂಬನಿ

ಕುವೈತ್ ಮಂಗಾಫ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆ ವಿಮಾನ(IAF) ವಿಮಾನ ಶುಕ್ರವಾರ ಬೆಳಗ್ಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

ಕೊಚ್ಚಿ: ಕುವೈತ್ ಮಂಗಾಫ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆ ವಿಮಾನ(IAF) ವಿಮಾನ ಶುಕ್ರವಾರ ಬೆಳಗ್ಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

ನೆಡುಂಬಸ್ಸೆರಿಯಲ್ಲಿರುವ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಮದು ಕಾರ್ಗೋ ಟರ್ಮಿನಲ್‌ ಹೊರಗೆ ಸುಮಾರು 35 ಆಂಬ್ಯುಲೆನ್ಸ್‌ಗಳು ಮತ್ತು ಸರಿಸುಮಾರು ಅಷ್ಟೇ ಸಂಖ್ಯೆಯ ಪೊಲೀಸ್ ವಾಹನಗಳು ಸಾಲುಗಟ್ಟಿ ನಿಂತಿದ್ದವು, ಕುವೈತ್‌ನ ಕಟ್ಟಡವೊಂದರಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಸತ್ತವರ ಪಾರ್ಥಿವ ಶರೀರವನ್ನು ಸ್ವೀಕರಿಸಲು ನಿಕಟ ಬಂಧುಗಳು, ಕುಟುಂಬಸ್ಥರು ಮತ್ತು ಆತ್ಮೀಯರು ಕಾಯುತ್ತಿದ್ದರು.

ಕುವೈತ್‌ನಲ್ಲಿ ಮೊನ್ನೆ ಬುಧವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪ್ರಾಣ ಕಳೆದುಕೊಂಡ 23 ಕೇರಳೀಯರ ಕುಟುಂಬಸ್ಥರು ತಾವು ಭರಿಸುವ ದುಃಖದ ಮೂಕ ಸಾಕ್ಷಿಯಲ್ಲಿ ಒಟ್ಟಿಗೆ ಸೇರಿದ್ದರು. ವೇದಿಕೆಯ ಬಳಿ ಕುಟುಂಬಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಗೌರವ ಸಲ್ಲಿಸಲು ಪೆಟ್ಟಿಗೆಗಳನ್ನು ಇರಿಸಲಾಗಿದೆ. ರಾಜ್ಯ ಸಚಿವರಾದ ಕೆ ರಾಜನ್, ಪಿ ರಾಜೀವ ಮತ್ತು ವೀಣಾ ಜಾರ್ಜ್ ಅವರು ಅಧಿಕಾರಿಗಳೊಂದಿಗೆ ಸಮನ್ವಯ ಮತ್ತು ವ್ಯವಸ್ಥೆಗಳ ಬಗ್ಗೆ ಚರ್ಚಿಸಿದರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಕೂಡ ಕುಟುಂಬಸ್ಥರನ್ನು ಭೇಟಿ ಮಾಡಿದರು. ಮೃತದೇಹಗಳನ್ನು ಸ್ವೀಕರಿಸಲು ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಸುರೇಶ್ ಗೋಪಿ ಕೂಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT