ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಜೊತೆ ಸಿಎಂ ಚಂದ್ರಬಾಬು ನಾಯ್ಡು  
ದೇಶ

ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಡಿಸಿಎಂ; ವಂಗಲಪುಡಿ ಅನಿತಾ ಗೃಹ ಸಚಿವೆ!

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಜು.12 ರಂದು ಅಧಿಕಾರ ವಹಿಸಿಕೊಂಡ ಬಳಿಕ ಚಂದ್ರಬಾಬು ನಾಯ್ಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಜು.12 ರಂದು ಅಧಿಕಾರ ವಹಿಸಿಕೊಂಡ ಬಳಿಕ ಚಂದ್ರಬಾಬು ನಾಯ್ಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಉದ್ಯಮಗಳು, ಸಾಮಾನ್ಯ ಆಡಳಿತ ಇಲಾಖೆಗಳನ್ನು ಚಂದ್ರಬಾಬು ನಾಯ್ಡು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.

ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಅವರನ್ನು ಆಂಧ್ರಪ್ರದೇಶದ ಡಿಸಿಎಂ ಮಾಡಲಾಗಿದ್ದು, ಅವರಿಗೆ ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಜಲ ಪೂರೈಕೆ, ಪರಿಸರ, ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗಳನ್ನು ನೀಡಲಾಗಿದೆ.

ಇನ್ನು ಟಿಡಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರಿಗೆ ಮಾನವ ಸಂಪನ್ಮೂಲ ಅಭಿವೃದ್ಧಿ, ಐಟಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್, ರಿಯಲ್-ಟೈಮ್ ಗವರ್ನೆನ್ಸ್ ಪೋರ್ಟ್ಫೋಲಿಯೊಗಳನ್ನು ನೀಡಲಾಗಿದೆ.

ಹಿರಿಯ ನಾಯಕ ಕೆ ಅಚ್ಚಂನಾಯ್ಡು ಅವರಿಗೆ ಕೃಷಿ ಮತ್ತು ಸಂಬಂಧಿತ ವಿಷಯಗಳ ಇಲಾಖೆಗಳನ್ನು ನೀಡಲಾಗಿದೆ ಆದರೆ ನಾಯ್ಡು ಅವರ ಸಂಪುಟದಲ್ಲಿ ಕಿರಿಯ ಸಚಿವರಾದ ವಂಗಲಪುಡಿ ಅನಿತಾ ಅವರನ್ನು ಗೃಹ ಸಚಿವರನ್ನಾಗಿ ಮಾಡಲಾಗಿದೆ. ಹಿಂದಿನ ಜಗನ್ ಮೋಹನ್ ರೆಡ್ಡಿ ಸರ್ಕಾರದಲ್ಲಿಯೂ ಮಹಿಳೆಯರು ಗೃಹ ಖಾತೆಯನ್ನು ಹೊಂದಿದ್ದರು.

ಪ್ರಮುಖ ಖಾತೆಯಾದ ಹಣಕಾಸು ಖಾತೆಯನ್ನು ಹಿರಿಯ ನಾಯಕ ಪಯ್ಯಾವುಲ ಕೇಶವ್ ಅವರಿಗೆ ನೀಡಲಾಗಿದ್ದು, ಬಿಜೆಪಿಯ ವೈ ಸತ್ಯ ಕುಮಾರ್ ಅವರಿಗೆ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡಲಾಗಿದೆ.

ಮೊದಲ ಬಾರಿಗೆ ಶಾಸಕ ಟಿ.ಜಿ.ಭರತ್ ಅವರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಮತ್ತು ಹಿರಿಯ ನಾಯಕ ಆನಂ ರಾಮನಾರಾಯಣ ರೆಡ್ಡಿ ಅವರಿಗೆ ದತ್ತಿ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. ಅಚ್ಚಂನಾಯ್ಡು ಅವರು ಸಂಪುಟಕ್ಕೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ BC ನಾಯಕ ಪಲ್ಲಾ ಶ್ರೀನಿವಾಸ ರಾವ್ ಅವರನ್ನು ಪಕ್ಷದ ಎಪಿ ಘಟಕದ ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

ರಾಜ್ಯದ ರೈತರಿಗೆ ತಕ್ಷಣ 10 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ

ಮದ್ಯಪ್ರಿಯರಿಗೆ ಶಾಕ್: ಹಲವು ಬ್ರ್ಯಾಂಡ್ ರಮ್, ವಿಸ್ಕಿ ಬ್ಯಾನ್: ನಿಮ್ಮ ಪ್ರಿಯವಾದದ್ದು ಇದೆಯೇ? ಇಲ್ಲಿದೆ ಮಾಹಿತಿ...

ಮಹಿಳೆಯರಿಗೆ ಸಿಹಿ ಸುದ್ದಿ; 'ಋತುತಾರೆ' ಯೋಜನೆ ಜಾರಿ, ರಾಯಭಾರಿಯಾಗಿ ನಟಿ ರಮ್ಯಾ

ಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದು BMTC ಕಂಡಕ್ಟರ್ ಅಟ್ಟಹಾಸ; Video ವೈರಲ್ ಬೆನ್ನಲ್ಲೇ ನಿರ್ವಾಹಕ ಅಮಾನತು!