ಮಣಿಪುರ ಸಿಎಂ ಬಂಗಲೆ ಬಳಿ ಅಗ್ನಿ ಅವಘಡ 
ದೇಶ

ಮಣಿಪುರ: ಸಿಎಂ ಎನ್ ಬಿರೇನ್ ಸಿಂಗ್ ಬಂಗಲೆ ಬಳಿ ಭಾರೀ ಅಗ್ನಿ ಅವಘಡ!

ಮಣಿಪುರದ ಮಾಜಿ ಐಎಎಸ್ ಅಧಿಕಾರಿಯೊಬ್ಬರ ಮನೆಯಲ್ಲಿ ಶನಿವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದು ಬಾಬುಪಾರಾದಲ್ಲಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆಯ ಇನ್ನೊಂದು ಬದಿಯಲ್ಲಿದೆ. ರಾಜ್ಯ ಸಚಿವಾಲಯವೂ ಸಮೀಪದಲ್ಲಿದ್ದು, ಹೆಚ್ಚಿನ ಭದ್ರತೆ ಹೊಂದಿರುವ ಪ್ರದೇಶವಾಗಿದೆ.

ಗುವಾಹಟಿ: ಮಣಿಪುರದ ಮಾಜಿ ಐಎಎಸ್ ಅಧಿಕಾರಿಯೊಬ್ಬರ ಮನೆಯಲ್ಲಿ ಶನಿವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದು ಬಾಬುಪಾರಾದಲ್ಲಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆಯ ಇನ್ನೊಂದು ಬದಿಯಲ್ಲಿದೆ. ರಾಜ್ಯ ಸಚಿವಾಲಯವೂ ಸಮೀಪದಲ್ಲಿದ್ದು, ಹೆಚ್ಚಿನ ಭದ್ರತೆ ಹೊಂದಿರುವ ಪ್ರದೇಶವಾಗಿದೆ.

ಈ ಕಟ್ಟಡ ಗೋವಾದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಮಾಜಿ ಐಎಎಸ್ ಅಧಿಕಾರಿ ತಂಗ್ಖೋಪಾವೊ ಕಿಪ್ಗೆನ್ ಅವರ ಕುಟುಂಬದ ಒಡೆತನದಲ್ಲಿದೆ. ಅವರು 2005 ರಲ್ಲಿ ನಿಧನರಾದರು.ಕಳೆದ ವರ್ಷದಿಂದ ಕಟ್ಟಡವನ್ನು ಅನಾಥವಾಗಿ ಬಿಡಲಾಗಿದೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದ ತಕ್ಷಣ ಮೂರು ಅಗ್ವಿಶಾಮಕ ವಾಹನಗಳು ಸ್ಥಳಕ್ಕೆ ಧಾರಿವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.

ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಮಣಿಪುರದಲ್ಲಿ ಹಿಂಸಾಚಾರ ನಡೆದಾಗಿನಿಂದ ಮನೆಯನ್ನು ಅನಾಥವಾಗಿ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಬೆಂಕಿಯ ಪರಿಣಾಮವಾಗಿ, ಮನೆಯ ಮೊದಲ ಮಹಡಿ ಭಾಗಶಃ ಸುಟ್ಟುಹೋಗಿದೆ, ಬೆಂಕಿಗೆ ನಿಖರವಾದ ಕಾರಣ ತಿಳಿದಿಲ್ಲ. ಘಟನೆಯ ಸತ್ಯತೆ ಕಂಡುಹಿಡಿಯಲು ತನಿಖೆಗಾಗಿ ಇಂಫಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT