ಸುರೇಶ್ ಗೋಪಿ 
ದೇಶ

ಇಂದಿರಾ ಗಾಂಧಿ 'ಭಾರತದ ಮಾತೆ' ಎಂದು ಬಣಿಸಿದ ಕೇಂದ್ರ ಸಚಿವ ಸುರೇಶ್ ಗೋಪಿ

ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರನ್ನು 'ಭಾರತದ ಮಾತೆ' ಎಂದು ಮತ್ತು ದಿವಂಗತ ಕಾಂಗ್ರೆಸ್ ಮುಖ್ಯಮಂತ್ರಿ ಕೆ ಕರುಣಾಕರನ್ ಅವರನ್ನು 'ಧೈರ್ಯಶಾಲಿ ಆಡಳಿತಗಾರ'...

ತ್ರಿಶೂರ್: ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರನ್ನು 'ಭಾರತದ ಮಾತೆ' ಎಂದು ಮತ್ತು ದಿವಂಗತ ಕಾಂಗ್ರೆಸ್ ಮುಖ್ಯಮಂತ್ರಿ ಕೆ ಕರುಣಾಕರನ್ ಅವರನ್ನು 'ಧೈರ್ಯಶಾಲಿ ಆಡಳಿತಗಾರ' ಎಂದು ಕೇಂದ್ರ ಸಚಿವ, ಬಿಜೆಪಿ ನಾಯಕ ಸುರೇಶ್ ಗೋಪಿ ಅವರು ಬಣ್ಣಿಸಿದ್ದಾರೆ.

ತ್ರಿಶೂರ್‌ನ ಪುಂಕುನ್ನಂನಲ್ಲಿರುವ ಕರುಣಾಕರನ್ ಅವರ ಸ್ಮಾರಕ “ಮುರಳಿ ಮಂದಿರಂ” ಗೆ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸುರೇಶ್‌ ಗೋಪಿ, ಕರುಣಾಕರನ್ ಮತ್ತು ಹಿರಿಯ ಮಾರ್ಕ್ಸ್‌ವಾದಿ ಇ ಕೆ ನಾಯನಾರ್ ಅವರನ್ನು ತಮ್ಮ ರಾಜಕೀಯ ಗುರುಗಳು ಎಂದು ಹೇಳಿದ್ದಾರೆ.

ಕುತೂಹಲಕಾರಿ ವಿಚಾರ ಎಂದರೆ ಕಳೆದ ಏಪ್ರಿಲ್ 26 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಕರುಣಾಕರನ್ ಅವರ ಪುತ್ರ ಮತ್ತು ಕಾಂಗ್ರೆಸ್ ಮುಖಂಡ ಕೆ ಮುರಳೀಧರನ್ ಅವರ ವಿರುದ್ಧ ಸುರೇಶ್ ಗೋಪಿ ಅವರು ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

ಕರುಣಾಕರನ್ ಸ್ಮಾರಕಕ್ಕೆ ಭೇಟಿ ನೀಡಿದ ಬಗ್ಗೆ ಯಾವುದೇ ರಾಜಕೀಯ ಅರ್ಥವನ್ನು ಕಲ್ಪಿಸಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಒತ್ತಾಯಿಸಿದ ಬಿಜೆಪಿ ನಾಯಕ, ತಮ್ಮ 'ಗುರು'ಗಳಿಗೆ ನಮನ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದರು.

ಇಕೆ ನಾಯನಾರ್ ಮತ್ತು ಅವರ ಪತ್ನಿ ಶಾರದಾ ಟೀಚರ್ ಮತ್ತು ಕರುಣಾಕರನ್ ಹಾಗೂ ಅವರ ಪತ್ನಿ ಕಲ್ಯಾಣಿಕುಟ್ಟಿ ಅಮ್ಮ ಅವರೊಂದಿಗೆ ತಾವು ಆತ್ಮೀಯತೆ ಹೊಂದಿರುವುದಾಗಿ ಸುರೇಶ್ ಗೋಪಿ ತಿಳಿಸಿದ್ದಾರೆ.

ಸುರೇಶ್ ಗೋಪಿ ಅವರು ಇಂದಿರಾ ಗಾಂಧಿಯನ್ನು ಭಾರತದ ಮಾತೆ ಮತ್ತು ಕರುಣಾಕರನ್ ಅವರು ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ಪಿತಾಮಹ ಎಂದು ಕೂಡ ಹೇಳಿದ್ದಾರೆ. ಇದಲ್ಲದೆ ಪ್ರಸಿದ್ಧ ಲೂರ್ದ್ ಮಾತಾ ಚರ್ಚ್‌ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್