ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ನೀರಿನ ಸಮಸ್ಯೆ: ಕೇಂದ್ರ ಮಧ್ಯಸ್ಥಿಕೆ ವಹಿಸಬೇಕೆಂದು ಎಎಪಿ ಶಾಸಕರ ಆಗ್ರಹ

ನೀರಿನ ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಆಮ್ ಆದ್ಮಿ ಪಕ್ಷದ ಶಾಸಕರು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ತೀವ್ರ ಬಿಸಿಲಿನ ನಡುವೆ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಈ ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಆಮ್ ಆದ್ಮಿ ಪಕ್ಷದ ಶಾಸಕರು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ದೆಹಲಿ ಪರಿಸ್ಥಿತಿ 'ತುಂಬಾ ನಿರ್ಣಾಯಕ'ವಾಗಿದೆ ಎಂದ ದೆಹಲಿ ವಿಧಾನಸಭೆಯ ಎಎಪಿ ಮುಖ್ಯ ಸಚೇತಕ ದಿಲೀಪ್ ಪಾಂಡೆ, ಯಮುನಾ ನೀರಿನ ಸಮಸ್ಯೆ ಅಂತರರಾಜ್ಯ ಸಮಸ್ಯೆಯಾಗಿದ್ದು, ಇದಕ್ಕೆ ಜಲಶಕ್ತಿ ಸಚಿವಾಲಯದ ಸಮನ್ವಯತೆಯ ಅಗತ್ಯವಿದೆ ಎಂದು ಹೇಳಿದರು.

ಎಎಪಿ ಶಾಸಕರು ತಮ್ಮ ಪತ್ರದಲ್ಲಿ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಲು ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಲಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ.

ನೀರಿನ ವಿಚಾರದಲ್ಲಿ ರಾಜಕೀಯ ಮಾಡುವ ಬದಲು, ನೀರಿನ ಬಿಕ್ಕಟ್ಟನ್ನು ಪರಿಹರಿಸಲು ಮತ್ತು ದೆಹಲಿಯ ಜನರಿಗೆ ನೀರು ನೀಡಲು ಎಲ್ಲಾ ಪಕ್ಷಗಳು ಶ್ರಮಿಸಬೇಕು ಎಂದು ಪಾಂಡೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ದೆಹಲಿಗೆ ಯಮುನಾ ನದಿ ನೀರಿನ ಪಾಲನ್ನು ಬಿಜೆಪಿ ಆಡಳಿತವಿರು ಹರಿಯಾಣ ಸರ್ಕಾರ ನೀಡುತ್ತಿಲ್ಲ ಎಂದು ಆಡಳಿತಾರೂಢ ಎಎಪಿ ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT