ರಾಹುಲ್ ಗಾಂಧಿ PTI
ದೇಶ

ಭಾರತದಲ್ಲಿ EVMಗಳು 'ಬ್ಲಾಕ್ ಬಾಕ್ಸ್' ಇದ್ದಂತೆ: ಇವಿಎಂ 'ವಿರೋಧಿ' ಎಲಾನ್ ಮಸ್ಕ್ ಗೆ ರಾಹುಲ್ ಗಾಂಧಿ ಬೆಂಬಲ

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪ್ರತಿಪಕ್ಷಗಳು ವಿದ್ಯುನ್ಮಾನ ಮತಯಂತ್ರಗಳ (EVM) ಸಮಸ್ಯೆಯನ್ನು ಬಲವಾಗಿ ಎತ್ತಿದ್ದವು. ಆದರೆ ಚುನಾವಣಾ ಫಲಿತಾಂಶಗಳು ಪ್ರಕಟವಾದ ತಕ್ಷಣ ಈ ವಿಷಯ ತಣ್ಣಗಾಗಿತ್ತು.

ನವದೆಹಲಿ: ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪ್ರತಿಪಕ್ಷಗಳು ವಿದ್ಯುನ್ಮಾನ ಮತಯಂತ್ರಗಳ (EVM) ಸಮಸ್ಯೆಯನ್ನು ಬಲವಾಗಿ ಎತ್ತಿದ್ದವು. ಆದರೆ ಚುನಾವಣಾ ಫಲಿತಾಂಶಗಳು ಪ್ರಕಟವಾದ ತಕ್ಷಣ ಈ ವಿಷಯ ತಣ್ಣಗಾಗಿತ್ತು. ಆದರೆ, ಕಾಲಕಾಲಕ್ಕೆ ನಾಯಕರು ಈ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಹಠಾತ್ತನೆ ಕಣ್ಮರೆಯಾಗಿದ್ದ ವಿಚಾರ ಮತ್ತೆ ಬೆಳಕಿಗೆ ಬರುತ್ತಿದ್ದು ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಇವಿಎಂ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರ ಪೋಸ್ಟ್ ಅನ್ನು ಮರುಪೋಸ್ಟ್ ಮಾಡಿದ ರಾಹುಲ್ ಗಾಂಧಿ, ಭಾರತದಲ್ಲಿ ಇವಿಎಂಗಳು "ಬ್ಲಾಕ್ ಬಾಕ್ಸ್" ಇದ್ದಂತೆ, ಅವುಗಳನ್ನು ಪರಿಶೀಲಿಸಲು ಯಾರಿಗೂ ಅವಕಾಶವಿಲ್ಲ. ಇದು ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಬಗ್ಗೆ ಗಂಭೀರ ಕಾಳಜಿಯನ್ನು ಎತ್ತಲಾಗುತ್ತಿದೆ. ಸಂಸ್ಥೆಗಳಲ್ಲಿ ಹೊಣೆಗಾರಿಕೆಯ ಕೊರತೆ ಇದ್ದಾಗ ಪ್ರಜಾಪ್ರಭುತ್ವ ನೆಪವಾಗಿ ಪರಿಣಮಿಸಿ ವಂಚನೆಯ ಸಾಧ್ಯತೆ ಹೆಚ್ಚುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ತಮ್ಮ ಪೋಸ್ಟ್ ನಲ್ಲಿ ಮುಂಬೈ ಘಟನೆಯನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಮುಂಬೈ ಪೊಲೀಸರು ಶಿವಸೇನಾ ಶಿಂಧೆ ಬಣದ ಸಂಸದ ರವೀಂದ್ರ ವಾಯ್ಕರ್ ಅವರ ಸೋದರ ಮಾವ ಮಂಗೇಶ್ ಪಾಂಡಿಲ್ಕರ್ ವಿರುದ್ಧ ಇವಿಎಂ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ನಿಷೇಧದ ನಡುವೆಯೂ ಮುಂಬೈನ ಗೋರೆಗಾಂವ್ ಚುನಾವಣಾ ಕೇಂದ್ರದೊಳಗೆ ಮಂಗೇಶ್ ಪಂಡಿಲ್ಕರ್ ಮೊಬೈಲ್ ಬಳಸಿದ್ದಾರೆ ಎಂಬ ಆರೋಪವಿದೆ.

ಇದಲ್ಲದೆ, ಪಂಡಿಲ್ಕರ್‌ಗೆ ಮೊಬೈಲ್ ಫೋನ್ ನೀಡಿದ ಆರೋಪದ ಮೇಲೆ ಚುನಾವಣಾ ಆಯೋಗದ ನೌಕರನ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ವಾಯುವ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ಅನೇಕ ಅಭ್ಯರ್ಥಿಗಳಿಂದ ಮತ್ತು ಚುನಾವಣಾ ಆಯೋಗದಿಂದ ದೂರುಗಳನ್ನು ಸ್ವೀಕರಿಸಿದ್ದಾರೆ. ಅದರ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ. ರವೀಂದ್ರ ವೈಕರ್ ಅವರು ವಾಯವ್ಯ ಕ್ಷೇತ್ರದಿಂದ ಮರು ಎಣಿಕೆಯ ನಂತರ ಕೇವಲ 48 ಮತಗಳಿಂದ ಗೆದ್ದರು. ಇದರಿಂದಾಗಿ ಸಾಕಷ್ಟು ವಿವಾದಗಳು ಉಂಟಾಗಿದ್ದವು.

ಶಿವಸೇನಾ (ಏಕನಾಥ್ ಶಿಂಧೆ ಬಣ) ಅಭ್ಯರ್ಥಿ ರವೀಂದ್ರ ವೈಕರ್ ಅವರು ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದಿಂದ ಕೇವಲ 48 ಮತಗಳಿಂದ ಗೆದ್ದಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಇದು ಅತ್ಯಂತ ಕಡಿಮೆ ಅಂತರದ ಗೆಲುವಾಗಿದೆ.

ವಾಸ್ತವವಾಗಿ, ಎಲೆಕ್ಟ್ರಾನಿಕ್ ಮತಯಂತ್ರಗಳು ಅಂದರೆ ಇವಿಎಂಗಳೊಂದಿಗೆ ಅಮೆರಿಕ ಅಧ್ಯಕ್ಷೀಯ ಚುನಾವಣೆಗಳನ್ನು ನಡೆಸದಂತೆ ಮಸ್ಕ್ ಸಲಹೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಪೋಸ್ಟ್ ನಲ್ಲಿ, 'ವಿದ್ಯುನ್ಮಾನ ಮತಯಂತ್ರಗಳನ್ನು ರದ್ದುಗೊಳಿಸಬೇಕು. ಇದು ಮಾನವರು ಅಥವಾ AI ನಿಂದ ಹ್ಯಾಕ್ ಆಗುವ ಅಪಾಯವಿದೆ ಎಂದು ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT