ಕಾಂಚನಜುಂಗಾ ರೈಲು ಅಪಘಾತ 
ದೇಶ

ರೈಲ್ವೆ ಸುರಕ್ಷತಾ ಆಯುಕ್ತರಿಂದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತದ ತನಿಖೆ

ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿಯಲ್ಲಿ ಸಂಭವಿಸಿದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತದ ಕುರಿತು ರೈಲ್ವೆ ಸುರಕ್ಷತಾ ಆಯುಕ್ತ(ಸಿಆರ್‌ಎಸ್)ರು ತನಿಖೆ ಆರಂಭಿಸಿದ್ದಾರೆ.

ನವದೆಹಲಿ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿಯಲ್ಲಿ ಸಂಭವಿಸಿದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತದ ಕುರಿತು ರೈಲ್ವೆ ಸುರಕ್ಷತಾ ಆಯುಕ್ತ(ಸಿಆರ್‌ಎಸ್)ರು ತನಿಖೆ ಆರಂಭಿಸಿದ್ದಾರೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ಹೇಳಿದ್ದಾರೆ.

ರೈಲು ಡಿಕ್ಕಿ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವಿನಿ ವೈಷ್ಣವ್ ಅವರು, ಇಂತಹ ಅಪಘಾತಗಳು ಮರುಕಳಿಸದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಈ ಅಪಘಾತದ ಕುರಿತು ರೈಲ್ವೆ ಸುರಕ್ಷತಾ ಆಯುಕ್ತರು ಕೂಲಂಕಷವಾಗಿ ತನಿಖೆ ಮಾಡುತ್ತಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಈಶಾನ್ಯ ಭಾರತವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ನಿರ್ಣಾಯಕ ಮಾರ್ಗದಲ್ಲಿ ರೈಲು ಕಾರ್ಯಾಚರಣೆಗಳನ್ನು ಮರುಸ್ಥಾಪಿಸುವುದು ರೈಲ್ವೆಗೆ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಈಶಾನ್ಯ ಫ್ರಾಂಟಿಯರ್ ರೈಲ್ವೇ (ಎನ್‌ಎಫ್‌ಆರ್) ಅಧಿಕಾರಿಯ ಪ್ರಕಾರ, ಇಂದು ಬೆಳಗ್ಗೆ ರಂಗಪಾಣಿ ನಿಲ್ದಾಣದ ಬಳಿ ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 9 ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ