ರಾಹುಲ್, ಪ್ರಿಯಾಂಕಾ ಗಾಂಧಿ  
ದೇಶ

ವಯನಾಡ್ ಉಪ ಚುನಾವಣೆಯಲ್ಲಿ ಸ್ಪರ್ಧೆ: 'ನನಗೇನೂ ಆತಂಕವಿಲ್ಲ'- ಪ್ರಿಯಾಂಕಾ ಗಾಂಧಿ

ಸಹೋದರ ರಾಹುಲ್ ಗಾಂಧಿ ಅವರಿಂದ ತೆರವಾಗಿರುವ ವಯನಾಡ್ ಉಪ ಚುನಾವಣೆ ಮೂಲಕ ಚೊಚ್ಚಲ ಚುನಾವಣೆ ಎದುರಿಸಲು ಪ್ರಿಯಾಂಕಾ ಗಾಂಧಿ ವಾದ್ರಾ ಸಜ್ಜಾಗಿದ್ದಾರೆ.

ನವದೆಹಲಿ: ಸಹೋದರ ರಾಹುಲ್ ಗಾಂಧಿ ಅವರಿಂದ ತೆರವಾಗಿರುವ ವಯನಾಡ್ ಉಪ ಚುನಾವಣೆ ಮೂಲಕ ಚೊಚ್ಚಲ ಚುನಾವಣೆ ಎದುರಿಸಲು ಪ್ರಿಯಾಂಕಾ ಗಾಂಧಿ ವಾದ್ರಾ ಸಜ್ಜಾಗಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದಾಗಿನಿಂದ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎದುರಾಳಿಯಾಗುವ ಸಾಧ್ಯತೆ ಹಾಗೂ ರಾಯ್ ಬರೇಲಿಯಿಂದ ಸೋನಿಯಾ ಗಾಂಧಿ ಅವರ ಉತ್ತರಾಧಿಕಾರಿ ಎಂದು ಬಿಂಬಿಸಲ್ಪಟ್ಟಿದ್ದರು. ಆದರೆ, ಅದು ಆಗಿರಲಿಲ್ಲ. ಇದೀಗ ಅವರ ಸಹೋದರ ರಾಹುಲ್ ಗಾಂಧಿ ಸತತ ಎರಡನೇ ಅವಧಿಗೆ ಗೆದ್ದಿರುವ ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ನನಗೆ ಸ್ವಲ್ಪವೂ ಆತಂಕವಿಲ್ಲ. ವಯನಾಡ್ ಪ್ರತಿನಿಧಿಸಲು ಸಾಧ್ಯವಾಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ವಯನಾಡ್ ಜನತೆ ರಾಹುಲ್ ಅನುಪಸ್ಥಿತಿಯನ್ನು ಅನುಭವಿಸಲು ಬಿಡುವುದಿಲ್ಲ ಎಂದಿದ್ದಾರೆ.

ರಾಯ್ ಬರೇಲಿಯಲ್ಲಿಯೂ ಉತ್ತಮ ಸಂಬಂಧವನ್ನು ಹೊಂದಿದ್ದೇನೆ ಏಕೆಂದರೆ. 20 ವರ್ಷಗಳಿಂದ ಅಲ್ಲಿ ಕೆಲಸ ಮಾಡಿದ್ದೇನೆ ಮತ್ತು ಆ ಸಂಬಂಧವು ಎಂದಿಗೂ ಮುರಿಯುವುದಿಲ್ಲ ಎಂದು ಹೇಳಿದರು.

ಪ್ರಿಯಾಂಕಾ ವಾದ್ರಾ ಅವರು ಲೋಕಸಭೆ ಚುನಾವಣೆ ಪೂರ್ವದಲ್ಲಿ ಅಮೇಥಿಯಿಂದ ಸ್ಪರ್ಧಿಸಲು ಪದೇ ಪದೇ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದ್ದರು. ಅಂತಿಮವಾಗಿ ಈ ಸ್ಥಾನವನ್ನು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರನ್ನು ಸೋಲಿಸಿದ ಕುಟುಂಬದ ನಿಷ್ಠಾವಂತ ಕಿಶೋರಿ ಲಾಲ್ ಶರ್ಮಾ ಅವರಿಗೆ ನೀಡಲಾಗಿತ್ತು. ಲೋಕಸಭೆ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗೆದ್ದರೆ, ಇದೇ ಮೊದಲಿಗೆ ಗಾಂಧಿ ಕುಟುಂಬದ ಮೂವರು ಸದಸ್ಯರು ಸಂಸತ್ತಿಗೆ ಬರಲಿದ್ದಾರೆ. ತಾಯಿ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT