ರಾಷ್ಟ್ರಪತಿ ಮುರ್ಮು-ಪ್ರಧಾನಿ ಮೋದಿ (ಸಂಗ್ರಹ ಚಿತ್ರ) 
ದೇಶ

ದೇಶದೆಲ್ಲೆಡೆ ಸಂಭ್ರಮದ ಬಕ್ರೀದ್ ಆಚರಣೆ; ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಶುಭಾಶಯ

ಬಕ್ರೀದ್​ ​ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.

ನವದೆಹಲಿ: ಬಕ್ರೀದ್​ ​ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.

ಈ ಪವಿತ್ರ ಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.

ಈದ್-ಉಲ್-ಅಧಾ ದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟಿನ ಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿ. ಎಲ್ಲರೂ ಸಂತೋಷದಿಂದ ಮತ್ತು ಆರೋಗ್ಯವಾಗಿರಲಿ.ಈದ್ ಮುಬಾರಕ್ ಎಂದು ಟ್ವಿಟರ್​​ ಮೂಲಕ ಪ್ರಧಾನಿ ಮೋದಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ದೇಶ ಮತ್ತು ವಿದೇಶಗಳಲ್ಲಿ ವಾಸಿಸುವ ಮುಸ್ಲಿಂ ಸಹೋದರ ಸಹೋದರಿಯರಿಗೆ ಈದ್-ಉಲ್-ಅಧಾ ಶುಭಾಶಯಗಳು. ಈ ತ್ಯಾಗದ ಹಬ್ಬವು ನಮ್ಮ ಸಂತೋಷವನ್ನು ಎಲ್ಲರೊಂದಿಗೆ, ವಿಶೇಷವಾಗಿ ನಿರ್ಗತಿಕ ಜನರೊಂದಿಗೆ ಹಂಚಿಕೊಳ್ಳುವ ಸಂದೇಶವನ್ನು ನೀಡುತ್ತದೆ. ಈ ಸಂದರ್ಭದಲ್ಲಿ, ಎಲ್ಲಾ ದೇಶವಾಸಿಗಳ, ವಿಶೇಷವಾಗಿ ವಂಚಿತ ವರ್ಗಗಳಿಗೆ ಸೇರಿದ ಜನರ ಹಿತದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ತಿಳಿಸಿದ್ದಾರೆ.

ಇಸ್ಲಾಮಿಕ್ ಕ್ಯಾಲೆಂಡರ್‌ನ 12 ನೇ ತಿಂಗಳಲ್ಲಿ ಅಂದರೆ ತಿಂಗಳು ಏ-ಜಿಲ್ಹಿಜ್ಜಾದಲ್ಲಿ 'ಈದ್-ಉಲ್-ಅಜಹಾ' ಹಬ್ಬವನ್ನು ಆಚರಿಸಲಾಗುತ್ತದೆ. ಮುಸ್ಲಿಂ ಸಮುದಾಯದ ಜನರಿಗೆ ಈ ಹಬ್ಬ ಬಹಳ ವಿಶೇಷವಾಗಿದೆ. ಈದ್-ಉಲ್-ಅಝಾ ಸಂದರ್ಭದಲ್ಲಿ ತ್ಯಾಗವನ್ನು ಮಾಡಲಾಗುತ್ತದೆ. ಆದ್ದರಿಂದ ಈ ಹಬ್ಬವನ್ನು ಬಕ್ರೀದ್ ಎಂದೂ ಕರೆಯುತ್ತಾರೆ.

ಈ ವರ್ಷ ಈ ವಿಶೇಷ ಹಬ್ಬವನ್ನು ಸೋಮವಾರ ಅಂದರೆ ಜೂನ್ 17 ರಂದು ಆಚರಿಸಲಾಗುತ್ತಿದೆ. ಈಗಾಗಲೇ ಮುಸ್ಲಿಂ ಬಾಂಧವರಲ್ಲಿ ಹಬ್ಬದ ಕಳೆ ಕಟ್ಟಿದೆ. ಈ ಹಬ್ಬದ ಸಮಯದಲ್ಲಿ ಇವರು ಅಪ್ಪುಗೆ ನೀಡುವ ಮೂಲಕ ಪರಸ್ಪರ ಶುಭಾಶಯಗಳನ್ನು ಹಂಚಿಕೊಳ್ಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT