ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿ 
ದೇಶ

ರಾಯ್ ಬರೇಲಿ ಉಳಿಸಿಕೊಂಡ ರಾಹುಲ್ ಗಾಂಧಿ; ವಯನಾಡ್ ನಿಂದ ಪ್ರಿಯಾಂಕಾ ಸ್ಪರ್ಧೆ: ಕಾಂಗ್ರೆಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವು ಮಾಡಲಿದ್ದಾರೆ ಮತ್ತು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವು ಮಾಡಲಿದ್ದಾರೆ ಮತ್ತು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಘೋಷಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಸಹೋದರನಿಂದ ತೆರವಾಗುವ ವಯನಾಡ್ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಖರ್ಗೆ ತಿಳಿಸಿದರು.

ರಾಹುಲ್ ಗಾಂಧಿ ಅವರು ವಯನಾಡ್ ಮತ್ತು ರಾಯ್ ಬರೇಲಿ ಲೋಕಸಭಾ ಎರಡೂ ಕ್ಷೇತ್ರಗಳಲ್ಲಿ ಗೆದ್ದಿದ್ದರು ಮತ್ತು ಜೂನ್ 4 ರಂದು ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾದ 14 ದಿನಗಳಲ್ಲಿ ಒಂದು ಸ್ಥಾನವನ್ನು ತೆರವು ಮಾಡಬೇಕಾಗಿತ್ತು. ಹೀಗಾಗಿ ರಾಹುಲ್ ಗಾಂಧಿ ಅವರು ಇಂದು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳುವ ನಿರ್ಧಾರ ಪ್ರಕಟಿಸಿದ್ದಾರೆ.

ವಯನಾಡ್ ಜನರಿಗೆ ತಮ್ಮ ಬಾಗಿಲು ಯಾವಾಗಲೂ ತೆರೆದಿರುತ್ತದೆ ಮತ್ತು ಕ್ಷೇತ್ರವು ತನ್ನ ಮತ್ತು ತಮ್ಮ ಸಹೋದರಿಯ ಮೂಲಕ ಪರಿಣಾಮಕಾರಿಯಾಗಿ ಇಬ್ಬರು ಸಂಸದರನ್ನು ಹೊಂದಲಿದೆ ಎಂದು ರಾಹುಲ್ ಗಾಂಧಿಯವರು ಹೇಳಿದ್ದಾರೆ.

"ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಮತ್ತು ಅವರು ಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎಂದು ನನಗೆ ವಿಶ್ವಾಸವಿದೆ. ವಯನಾಡಿನ ಜನರು ತಮಗೆ ಇಬ್ಬರು ಸಂಸತ್ ಸದಸ್ಯರಿದ್ದಾರೆ ಎಂದು ಭಾವಿಸಬಹುದು; ಒಬ್ಬರು ನನ್ನ ಸಹೋದರಿ ಮತ್ತು ಇನ್ನೊಬ್ಬರು ನಾನು. ನನ್ನ ಬಾಗಿಲು ಯಾವಾಗಲೂ ವಯನಾಡಿನ ಜನರಿಗಾಗಿ ತೆರೆದಿರುತ್ತದೆ. ನಾನು ವಯನಾಡಿನ ಪ್ರತಿಯೊಬ್ಬ ವ್ಯಕ್ತಿಯನ್ನು ಪ್ರೀತಿಸುತ್ತೇನೆ ಎಂದು ರಾಹುಲ್ ಗಾಂಧಿ ತಿಳಿಸಿದರು.

ಈ ಘೋಷಣೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ, ಅಮೇಥಿ ಮತ್ತು ರಾಯ್ ಬರೇಲಿಯೊಂದಿಗಿನ ದೀರ್ಘಕಾಲದ ಸಂಬಂಧವು ಮುರಿಯಲಾಗದು ಎಂದು ಹೇಳಿದರು.

"ವಯನಾಡನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಮತ್ತು ಅವರ (ರಾಹುಲ್ ಗಾಂಧಿ) ಅನುಪಸ್ಥಿತಿಯನ್ನು ಅನುಭವಿಸಲು ನಾನು ಬಿಡುವುದಿಲ್ಲ. ನಾನು ಕಷ್ಟಪಟ್ಟು ಕೆಲಸ ಮಾಡುತ್ತೇನೆ ಮತ್ತು ಎಲ್ಲರನ್ನು ಸಂತೋಷಪಡಿಸಲು ಮತ್ತು ಉತ್ತಮ ಪ್ರತಿನಿಧಿಯಾಗಲು ಪ್ರಯತ್ನಿಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT