ಸಂಗ್ರಹ ಚಿತ್ರ 
ದೇಶ

ವೃದ್ಧ ತಂದೆ-ತಾಯಿಯ ಕರೆದೊಯ್ತಿದ್ದ ಬೈಕ್ ಗೆ ಟ್ರಕ್ ಡಿಕ್ಕಿ: ಸವಾರರನ್ನು 200 ಮೀಟರ್ ಎಳೆದೊಯ್ದು ಇಬ್ಬರು ದುರ್ಮರಣ

ಬಿಹಾರದ ಪುರ್ನಿಯಾದಲ್ಲಿ ಯುವಕನೊಬ್ಬ ತನ್ನ ವೃದ್ಧ ತಂದೆ-ತಾಯಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಮೂವರಿಗೂ ಡಿಕ್ಕಿ ಹೊಡೆದಿದೆ.

ಬಿಹಾರದ ಪುರ್ನಿಯಾದಲ್ಲಿ ಯುವಕನೊಬ್ಬ ತನ್ನ ವೃದ್ಧ ತಂದೆ-ತಾಯಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಮೂವರಿಗೂ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸೇರಿದಂತೆ ಮೂವರೂ ಲಾರಿಯಡಿ ಸಿಲುಕಿದ್ದಾರೆ. ಲಾರಿಯ ವೇಗ ಎಷ್ಟಿತ್ತೆಂದರೆ ನಿಲ್ಲದೆ ಮೂವರನ್ನೂ 200 ಮೀಟರ್ ವರೆಗೆ ಎಳೆದೊಯ್ದಿದೆ. ಲಾರಿ ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ವೃದ್ಧ ದಂಪತಿ ಸಾವನ್ನಪ್ಪಿದ್ದು ಮಗ ರಕ್ತದ ಮಡುವಿನಲ್ಲಿ ಬಿದ್ದಿದ್ದನು.

ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು ಈ ವೇಳೆ ಸಾರ್ವಜನಿಕರು ಆತನನ್ನು ಹಿಡಿದಿದ್ದು ಆರೋಪಿ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಪುರ್ನಿಯಾ ನಗರದ ಮಹಾಮಾಯಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೃತ ದಂಪತಿಯನ್ನು 72 ವರ್ಷದ ಲಾಲು ಓರಾನ್ ಮತ್ತು 65 ವರ್ಷದ ಪಾರ್ವತಿ ದೇವಿ ಎಂದು ಗುರುತಿಸಲಾಗಿದೆ. ಅವರ ಮಗ 23 ವರ್ಷದ ಸಿಲ್ವೆಸ್ಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಭಾನುವಾರ ಸಂಜೆ 4 ಗಂಟೆಗೆ ಸಿಲ್ವೆಸ್ಟರ್ ತನ್ನ ಪೋಷಕರೊಂದಿಗೆ ಬೈಕ್‌ನಲ್ಲಿ ಜೀಲ್ ಟೋಲಾ ಗ್ರಾಮದಿಂದ ಹೊರಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಮಾರ್ಗಮಧ್ಯೆ ವೇಗವಾಗಿ ಬಂದ ಟ್ರಕ್ ಅವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸಮೇತ ಮೂವರೂ ಲಾರಿಯಡಿ ಸಿಲುಕಿದ್ದಾರೆ. ಟ್ರಕ್ ನಿಲ್ಲದೆ ಮುಂದೆ ಸಾಗಿದೆ. ಟ್ರಕ್ ಮೂವರನ್ನೂ 200 ಮೀಟರ್ ವರೆಗೆ ಎಳೆದುಕೊಂಡು ಹೋಗಿದೆ.

ಸದ್ಯ ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತದ ಮಾಹಿತಿ ತಿಳಿದ ಕುಟುಂಬಸ್ಥರಿಗೆ ಅಲ್ಲಿ ರೋದನ ಮುಗಿಲು ಮುಟ್ಟಿತ್ತು. ಅಪಘಾತದ ಸ್ಥಳ ಅತ್ಯಂತ ಭಯಾನಕವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸದ್ಯ ಆರೋಪಿ ಟ್ರಕ್ ಚಾಲಕ ಪೊಲೀಸರ ವಶದಲ್ಲಿದ್ದಾನೆ. ಆತನ ವಿರುದ್ಧ ಮುಂದಿನ ಕ್ರಮ ಜರುಗಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT