ಬಂಗಾಳ ರೈಲು ದುರಂತ 
ದೇಶ

'ಸಂಪೂರ್ಣ ದುರಾಡಳಿತ': ಪಶ್ಚಿಮ ಬಂಗಾಳ ರೈಲು ಅಪಘಾತದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಕನಿಷ್ಟ 15 ಮಂದಿಯ ಸಾವಿಗೆ ಕಾರಣವಾಗಿರುವ ಪಶ್ಚಿಮ ಬಂಗಾಳ ರೈಲು ಅಪಘಾತದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 'ಸಂಪೂರ್ಣ ದುರಾಡಳಿತ' ಎಂದು ಕಿಡಿಕಾರಿದ್ದಾರೆ.

ನವದೆಹಲಿ: ಕನಿಷ್ಟ 15 ಮಂದಿಯ ಸಾವಿಗೆ ಕಾರಣವಾಗಿರುವ ಪಶ್ಚಿಮ ಬಂಗಾಳ ರೈಲು ಅಪಘಾತದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 'ಸಂಪೂರ್ಣ ದುರಾಡಳಿತ' ಎಂದು ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳದ ಸಿಲ್ಗುರಿಯಲ್ಲಿ ನಡೆದ ಗೂಡ್ಸ್ ರೈಲು ಮತ್ತು ಕಾಂಚನ್ ಜುಂಗಾ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ ಕನಿಷ್ಟ 15 ಮಂದಿ ಸಾವಿಗೀಡಾಗಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದೇ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಅಂತೆಯೇ ಕೇಂದ್ರ ರೈಲ್ವೇ ಇಲಾಖೆ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಖರ್ಗೆ "ಸಂಪೂರ್ಣ ದುರಾಡಳಿತ" ಎಂದು ವಾಗ್ದಾಳಿ ನಡೆಸಿದರು.

"ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತದಿಂದ ತೀವ್ರ ದುಃಖಿತವಾಗಿದೆ, ಅಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯಗಳು ಭಯಾನಕವಾಗಿದೆ. ಅಪಘಾತದ ಸಂತ್ರಸ್ಥರೊಂದಿಗೆ ನಾವಿದ್ದು, ಅಗತ್ಯ ನೆರವು ನೀಡುತ್ತೇವೆ. ಈ ದುಃಖದ ಸಮಯದಲ್ಲಿ, ನಾವು ಪ್ರತಿಯೊಬ್ಬರಿಗೂ ನಮ್ಮ ಒಗ್ಗಟ್ಟು ಮತ್ತು ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ. ತಕ್ಷಣವೇ ಮತ್ತು ಪೂರ್ಣ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಮೋದಿ ಸರ್ಕಾರದ ವಿರುದ್ಧ ಗುಡುಗಿದ ಖರ್ಗೆ, ''ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರ ರೈಲ್ವೆ ಸಚಿವಾಲಯ ಸಂಪೂರ್ಣ ದುರಾಡಳಿತದಲ್ಲಿ ತೊಡಗಿದೆ. ಜವಾಬ್ದಾರಿಯುತ ಪ್ರತಿಪಕ್ಷವಾಗಿ, ಮೋದಿ ಸರ್ಕಾರವು ರೈಲ್ವೆ ಸಚಿವಾಲಯವನ್ನು "ಕ್ಯಾಮೆರಾ-ಚಾಲಿತ" ಸ್ವಯಂ ಪ್ರಚಾರದ ವೇದಿಕೆಯಾಗಿ ಹೇಗೆ ವ್ಯವಸ್ಥಿತವಾಗಿ ಪರಿವರ್ತಿಸಿದೆ ಎಂಬುದನ್ನು ಒತ್ತಿಹೇಳುವುದು ನಮ್ಮ ಬದ್ಧ ಕರ್ತವ್ಯವಾಗಿದೆ. ಇಂದಿನ ದುರಂತವು ಈ ಕಟುವಾದ ವಾಸ್ತವದ ಮತ್ತೊಂದು ಜ್ಞಾಪನೆಯಾಗಿದೆ" ಎಂದು ಅವರು ಆರೋಪಿಸಿದರು.

ಈ ಅಪಘಾತಕ್ಕೆ ಸಂಪೂರ್ಣವಾಗಿ ಮೋದಿ ಸರ್ಕಾರವೇ ಹೊಣೆ ಎಂದು ಆರೋಪಿಸಿದ ಖರ್ಗೆ, ಭಾರತೀಯ ರೈಲ್ವೆ ಇಲಾಖೆಯನ್ನು ಕ್ರಿಮಿನಲ್ ಗಳ ಕೈಗೆ ನೀಡಿದ್ದಾರೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಮಲ್ಲಿಕಾರ್ಜುನ ಖರ್ಗೆ

ಸೋಮವಾರ ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೀಲ್ದಾಹ್ ಕಡೆಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ