ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್  online desk
ದೇಶ

ಯಾದವರು, ಮುಸ್ಲಿಮರು ನನ್ನಿಂದ ಯಾವುದೇ ಸಹಾಯ ನಿರೀಕ್ಷಿಸಬೇಡಿ: ಜೆಡಿಯು ಸಂಸದ

ಯಾದವರು, ಮುಸ್ಲಿಮರು ತಮ್ಮಿಂದ ಯಾವುದೇ ಸಹಾಯ ನಿರೀಕ್ಷಿಸಬಾರದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದ ಸಂಸದ ದೇವೇಶ್ ಚಂದ್ರ ಠಾಕೂರ್ ಹೇಳಿದ್ದಾರೆ.

ಪಾಟ್ನ: ಯಾದವರು, ಮುಸ್ಲಿಮರು ತಮ್ಮಿಂದ ಯಾವುದೇ ಸಹಾಯ ನಿರೀಕ್ಷಿಸಬಾರದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದ ಸಂಸದ ದೇವೇಶ್ ಚಂದ್ರ ಠಾಕೂರ್ ಹೇಳಿದ್ದಾರೆ.

ಬಿಜೆಪಿ-ಜೆಡಿಯು ಮೈತ್ರಿಕೂಟಕ್ಕೆ ಮುಸ್ಲಿಮರು ಹಾಗೂ ಯಾದವರು ಮತ ಹಾಕಿಲ್ಲ ಆದ್ದರಿಂದ ತಮ್ಮಿಂದ ಈ ಎರಡೂ ಸಮುದಾಯದವರು ಯಾವುದೇ ಸಹಾಯ ನಿರೀಕ್ಷಿಸಬಾರದು ಎಂದು ಸೀತಾಮರ್ಹಿ ಸಂಸದರು ಹೇಳಿದ್ದಾರೆ.

ಎನ್ ಡಿಎ ಮೈತ್ರಿಕೂಟದ ಸಾಂಪ್ರದಾಯಿಕ ಮತದಾರರು ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳದತ್ತ ಆಕರ್ಷಿತರಾದರು ಎಂದೂ ಸಂಸದರು ಆರೋಪಿಸಿದ್ದಾರೆ. ಬಿಹಾರ ವಿಧಾನಪರಿಷತ್ ನ ಅಧ್ಯಕ್ಷರಾಗಿದ್ದ ಠಾಕೂರ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 55,000 ಮತಗಳಿಂದ ಗೆದ್ದು ಸಂಸತ್ ಗೆ ಮೊದಲ ಬಾರಿ ಪ್ರವೇಶಿಸಿದ್ದಾರೆ.

"ನಾನು ಸೂರಿಸ್ (ಮೀನುಗಾರ ಸಮುದಾಯ) ಮತ್ತು ಕಲ್ವಾರ್‌ಗಳ ಮತಗಳನ್ನು ಪಡೆದಿಲ್ಲ. ಕುಶ್ವಾಹಗಳು ಸಹ ನನ್ನನ್ನು ತೊರೆದರು. ಗೌರವಾನ್ವಿತ ಲಾಲು ಪ್ರಸಾದ್ (ಆರ್‌ಜೆಡಿ ವರಿಷ್ಠ) ಅನೇಕ ಕುಶ್ವಾಹಗಳಿಗೆ ಟಿಕೆಟ್ ನೀಡಿದ ಕಾರಣಕ್ಕಾಗಿ. ಬೇರೆಡೆಯಿಂದ ಆಯ್ಕೆಯಾದ ಕುಶ್ವಾಹ ಸದಸ್ಯರು ನನ್ನ ಕ್ಷೇತ್ರದಲ್ಲಿರುವ ಆ ಸಮುದಾಯಕ್ಕೆ ಏನಾದರೂ ಸಹಾಯ ಮಾಡಬಹುದೇ? ಎಂದು ಪ್ರಶ್ನಿಸಿದ್ದಾರೆ.

ನಂತರ, "ಯಾದವರು ಮತ್ತು ಮುಸ್ಲಿಮರು ನನ್ನಿಂದ ಯಾವುದೇ ಸಹಾಯವನ್ನು ನಿರೀಕ್ಷಿಸಬಾರದು ಎಂದು ನಾನು ಸ್ಪಷ್ಟಪಡಿಸಿದ್ದೇನೆ, ಅವರು ನನ್ನನ್ನು ಭೇಟಿಯಾದಾಗ ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗುವುದು, ಚಹಾ ಮತ್ತು ತಿಂಡಿಗಳನ್ನು ಸಹ ನೀಡಲಾಗುವುದು. ಆದರೆ ನಾನು ಅವರ ಯಾವುದೇ ಸಮಸ್ಯೆಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

"ನನ್ನ ಪಕ್ಷವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಕಾರಣಕ್ಕೆ ನೀವು ನನಗೆ ಮತ ಹಾಕದಿರುವಾಗ ನಾನು ನಿಮಗಾಗಿ ಕೆಲಸ ಮಾಡಬೇಕೆಂದು ನೀವು ಹೇಗೆ ನಿರೀಕ್ಷಿಸುತ್ತೀರಿ ಎಂದು ನಾನು ಮುಸ್ಲಿಂ ಸಹೋದರನನ್ನು ಕೇಳಿದ್ದೆ" ಎಂದು ಠಾಕೂರ್ ಈ ಹಿಂದೆ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT