ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್  online desk
ದೇಶ

ಯಾದವರು, ಮುಸ್ಲಿಮರು ನನ್ನಿಂದ ಯಾವುದೇ ಸಹಾಯ ನಿರೀಕ್ಷಿಸಬೇಡಿ: ಜೆಡಿಯು ಸಂಸದ

ಯಾದವರು, ಮುಸ್ಲಿಮರು ತಮ್ಮಿಂದ ಯಾವುದೇ ಸಹಾಯ ನಿರೀಕ್ಷಿಸಬಾರದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದ ಸಂಸದ ದೇವೇಶ್ ಚಂದ್ರ ಠಾಕೂರ್ ಹೇಳಿದ್ದಾರೆ.

ಪಾಟ್ನ: ಯಾದವರು, ಮುಸ್ಲಿಮರು ತಮ್ಮಿಂದ ಯಾವುದೇ ಸಹಾಯ ನಿರೀಕ್ಷಿಸಬಾರದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದ ಸಂಸದ ದೇವೇಶ್ ಚಂದ್ರ ಠಾಕೂರ್ ಹೇಳಿದ್ದಾರೆ.

ಬಿಜೆಪಿ-ಜೆಡಿಯು ಮೈತ್ರಿಕೂಟಕ್ಕೆ ಮುಸ್ಲಿಮರು ಹಾಗೂ ಯಾದವರು ಮತ ಹಾಕಿಲ್ಲ ಆದ್ದರಿಂದ ತಮ್ಮಿಂದ ಈ ಎರಡೂ ಸಮುದಾಯದವರು ಯಾವುದೇ ಸಹಾಯ ನಿರೀಕ್ಷಿಸಬಾರದು ಎಂದು ಸೀತಾಮರ್ಹಿ ಸಂಸದರು ಹೇಳಿದ್ದಾರೆ.

ಎನ್ ಡಿಎ ಮೈತ್ರಿಕೂಟದ ಸಾಂಪ್ರದಾಯಿಕ ಮತದಾರರು ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳದತ್ತ ಆಕರ್ಷಿತರಾದರು ಎಂದೂ ಸಂಸದರು ಆರೋಪಿಸಿದ್ದಾರೆ. ಬಿಹಾರ ವಿಧಾನಪರಿಷತ್ ನ ಅಧ್ಯಕ್ಷರಾಗಿದ್ದ ಠಾಕೂರ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 55,000 ಮತಗಳಿಂದ ಗೆದ್ದು ಸಂಸತ್ ಗೆ ಮೊದಲ ಬಾರಿ ಪ್ರವೇಶಿಸಿದ್ದಾರೆ.

"ನಾನು ಸೂರಿಸ್ (ಮೀನುಗಾರ ಸಮುದಾಯ) ಮತ್ತು ಕಲ್ವಾರ್‌ಗಳ ಮತಗಳನ್ನು ಪಡೆದಿಲ್ಲ. ಕುಶ್ವಾಹಗಳು ಸಹ ನನ್ನನ್ನು ತೊರೆದರು. ಗೌರವಾನ್ವಿತ ಲಾಲು ಪ್ರಸಾದ್ (ಆರ್‌ಜೆಡಿ ವರಿಷ್ಠ) ಅನೇಕ ಕುಶ್ವಾಹಗಳಿಗೆ ಟಿಕೆಟ್ ನೀಡಿದ ಕಾರಣಕ್ಕಾಗಿ. ಬೇರೆಡೆಯಿಂದ ಆಯ್ಕೆಯಾದ ಕುಶ್ವಾಹ ಸದಸ್ಯರು ನನ್ನ ಕ್ಷೇತ್ರದಲ್ಲಿರುವ ಆ ಸಮುದಾಯಕ್ಕೆ ಏನಾದರೂ ಸಹಾಯ ಮಾಡಬಹುದೇ? ಎಂದು ಪ್ರಶ್ನಿಸಿದ್ದಾರೆ.

ನಂತರ, "ಯಾದವರು ಮತ್ತು ಮುಸ್ಲಿಮರು ನನ್ನಿಂದ ಯಾವುದೇ ಸಹಾಯವನ್ನು ನಿರೀಕ್ಷಿಸಬಾರದು ಎಂದು ನಾನು ಸ್ಪಷ್ಟಪಡಿಸಿದ್ದೇನೆ, ಅವರು ನನ್ನನ್ನು ಭೇಟಿಯಾದಾಗ ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗುವುದು, ಚಹಾ ಮತ್ತು ತಿಂಡಿಗಳನ್ನು ಸಹ ನೀಡಲಾಗುವುದು. ಆದರೆ ನಾನು ಅವರ ಯಾವುದೇ ಸಮಸ್ಯೆಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

"ನನ್ನ ಪಕ್ಷವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಕಾರಣಕ್ಕೆ ನೀವು ನನಗೆ ಮತ ಹಾಕದಿರುವಾಗ ನಾನು ನಿಮಗಾಗಿ ಕೆಲಸ ಮಾಡಬೇಕೆಂದು ನೀವು ಹೇಗೆ ನಿರೀಕ್ಷಿಸುತ್ತೀರಿ ಎಂದು ನಾನು ಮುಸ್ಲಿಂ ಸಹೋದರನನ್ನು ಕೇಳಿದ್ದೆ" ಎಂದು ಠಾಕೂರ್ ಈ ಹಿಂದೆ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!