ಕಾರು ರಿವರ್ಸ್ ವೇಳೆ ಪ್ರಪಾತಕ್ಕೆ ಬಿದ್ದು ಯುವತಿ ಸಾವು 
ದೇಶ

Video: Reels ಹುಚ್ಚಾಟ; ಬೆಟ್ಟದ ತುದಿಯಲ್ಲಿ ಕಾರು ರಿವರ್ಸ್ ವೇಳೆ ಪ್ರಪಾತಕ್ಕೆ ಬಿದ್ದು ಯುವತಿ ಸಾವು!

ರೀಲ್ಸ್ ಮಾಡುವ ಹುಚ್ಚು ಸಾಹಸಕ್ಕೆ ಮತ್ತೊಂದು ಬಲಿಯಾಗಿದ್ದು, ಬೆಟ್ಟದ ತುದಿಯಲ್ಲಿ ರಿವರ್ಸ್ ಮಾಡುವ ರೀಲ್ಸ್ ಮಾಡುತ್ತಿದ್ದ ವೇಳೆ ಕಾರು ಪ್ರಪಾತಕ್ಕೆ ಉರುಳಿ 23 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ.

ಮುಂಬೈ: ರೀಲ್ಸ್ ಮಾಡುವ ಹುಚ್ಚು ಸಾಹಸಕ್ಕೆ ಮತ್ತೊಂದು ಬಲಿಯಾಗಿದ್ದು, ಬೆಟ್ಟದ ತುದಿಯಲ್ಲಿ ರಿವರ್ಸ್ ಮಾಡುವ ರೀಲ್ಸ್ ಮಾಡುತ್ತಿದ್ದ ವೇಳೆ ಕಾರು ಪ್ರಪಾತಕ್ಕೆ ಉರುಳಿ 23 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ.

ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದ ಸುಲಿಭಂಜನ್‌ ಬೆಟ್ಟದಲ್ಲಿ ಈ ದುರ್ಘಟನೆ ವರದಿಯಾಗಿದ್ದು, ಕಾರಲ್ಲಿ ಕೂತು ರೀಲ್ಸ್‌ ಮಾಡುವ ದುಸ್ಸಾಹಸಕ್ಕೆ ಮುಂದಾದ ಯುವತಿ, ಬೃಹತ್ ಪ್ರಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಜರುಗಿದೆ.

ಮೃತ ಯುವತಿಯನ್ನು ಶ್ವೇತಾ ದೀಪಕ್ ಸುರ್ವಾಸೆ (23 ವರ್ಷ) ಎಂದು ಗುರುತಿಸಲಾಗಿದ್ದು, ಆಕೆ ಸಂಭಾಜಿ ನಗರದ ಹನುಮಾನ್ ನಗರ ನಿವಾಸಿ ಎನ್ನಲಾಗಿದೆ.

ಮೂಲಗಳ ಪ್ರಕಾರ ಸ್ನೇಹಿತರ ಜತೆಗೆ ಸುಲಿಭಂಜನ್‌ ಗ್ರಾಮದ ದತ್ತ ಮಂದಿರಕ್ಕೆ ಶ್ವೇತಾ ತೆರಳಿದ್ದರು. ಈ ವೇಳೆ ಬೆಟ್ಟದ ಮೇಲೆ ಕಾರು ನಿಲ್ಲಿಸಿ ರೀಲ್ಸ್‌ ಮಾಡಲು ಮುಂದಾಗಿದ್ದರು. ಕಾರು ಚಾಲನೆ ಬಗ್ಗೆ ಅರಿವಿರದಿದ್ದರೂ ಶ್ವೇತಾ ಕಾರಿನ ಚಾಲಕನ ಸೀಟಿನಲ್ಲಿ ಕೂತು ಡ್ರೈವ್‌ ಮಾಡುವ ಸಾಹಸ ನಡೆಸಿದ್ದಾರೆ. ಈ ವೇಳೆ ಸ್ನೇಹಿತ ಶಿವರಾಜ್ ಸಂಜಯ್ ಮುಳೆ (25) ವಿಡಿಯೋ ರೆಕಾರ್ಡ್‌ ಮಾಡುತ್ತಿದ್ದರು.

ಟೊಯೊಟಾ ಇಟಿಯೋಸ್ ಕಾರನ್ನು ನಿಧಾನವಾಗಿ ರಿವರ್ಸ್ ಗೇರ್‌ನಲ್ಲಿ ಶ್ವೇತಾ ಚಲಾಯಿಸುತ್ತಿದ್ದರು. ಬ್ರೇಕ್‌ ಅಥವಾ ಎಕ್ಸಲೇಟರ್‌ ಬಗ್ಗೆ ತಿಳುವಳಿಕೆ ಇಲ್ಲದೆ ಏಕಾಏಕಿ ಎಕ್ಸಲೇಟರ್‌ ಒತ್ತಿದ್ದಾರೆ. ನೋಡ ನೋಡುತ್ತಿದ್ದಂತೆ, ಸ್ನೇಹಿತರ ಕಣ್ಣ ಮುಂದೆಯೇ ಕಾರು ಸಮೇತ ಆಕೆ ಸುಮಾರು 300 ಅಡಿ ಆಳದ ಪ್ರಪಾತಕ್ಕೆ ಬಿದ್ದಿದ್ದಾರೆ. ಹಿಮ್ಮುಖವಾಗಿ ಚಲಿಸುತ್ತಿದ್ದ ಕಾರು, ಪ್ರಪಾತಕ್ಕೆ ಅವಘಡಗಳನ್ನು ತಡೆಯಲು ನಿರ್ಮಿಸಲಾಗಿದ್ದ ಗೋಡೆ ಭೇದಿಸಿಕೊಂಡು 300 ಅಡಿ ಆಳಕ್ಕೆ ಉರುಳಿದೆ. ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.

ಒಂದು ಗಂಟೆ ಕಾರ್ಯಾಚರಣೆ

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಪೊಲೀಸರು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಕಾರನ್ನು ಮೇಲಕ್ಕೆ ಎತ್ತಿದರು. ತೀವ್ರವಾಗಿ ಗಾಯಗೊಂಡಿದ್ದ ಶ್ವೇತಾ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!