ಚೆನ್ನೈನಲ್ಲಿ ಹಿಟ್ ಅಂಡ್ ರನ್ ಪ್ರಕರಣ 
ದೇಶ

ಫುಟ್​ಪಾತ್ ​ಮೇಲೆ ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿದ ಸಂಸದರ ಮಗಳಿಗೆ ''ಸ್ಟೇಷನ್ ಜಾಮೀನು'', ಬಿಡುಗಡೆ!

ಫುಟ್​ಪಾತ್ ​ಮೇಲೆ ಮಲಗಿದ್ದ ವ್ಯಕ್ತಿ ಮೇಲೆ ಸಂಸದರೊಬ್ಬರ ಮಗಳು ಕಾರು ಹರಿಸಿ ಕೊಂದು ಹಾಕಿದ್ದು, ಆಕೆ ''ಸ್ಟೇಷನ್ ಜಾಮೀನಿ''ನ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈ: ಫುಟ್​ಪಾತ್ ​ಮೇಲೆ ಮಲಗಿದ್ದ ವ್ಯಕ್ತಿ ಮೇಲೆ ಸಂಸದರೊಬ್ಬರ ಮಗಳು ಕಾರು ಹರಿಸಿ ಕೊಂದು ಹಾಕಿದ್ದು, ಆಕೆ ''ಸ್ಟೇಷನ್ ಜಾಮೀನಿ''ನ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ ಸಂಸದ ಬೀಡಾ ಮಸ್ತಾನ್ ರಾವ್ ಅವರ ಪುತ್ರಿ ಚೆನ್ನೈನಲ್ಲಿ ವ್ಯಕ್ತಿಯೊಬ್ಬನ ಮೇಲೆ ಕಾರು ಹತ್ತಿಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಆಕೆಯನ್ನು ಚೆನ್ನೈ ಪೊಲೀಸರು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಕೂಡ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹಿಟ್​ ಆ್ಯಂಡ್​ ರನ್ ಪ್ರಕರಣದಲ್ಲಿ ವೈಎಸ್​ಆರ್​ ಕಾಂಗ್ರೆಸ್​ ಪಕ್ಷದ ರಾಜ್ಯಸಭಾ ಸಂಸದ ಬಿಡಾ ಮಸ್ತಾನ್ ರಾವ್ ಅವರ ಪುತ್ರಿ ಹೆಸರು ಕೇಳಿಬರುತ್ತಿದ್ದು, ಈ ಘಟನೆಯಲ್ಲಿ ಸೂರ್ಯ ಎನ್ನುವ 21ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಬಳಿಕ ಕೊನೆಯುಸಿರೆಳೆದಿದ್ದಾರೆ. ಆರೋಪಿ ಮಾಧುರಿಯನ್ನು ಚೆನ್ನೈನ ಪೊಲೀಸರು ಮಂಗಳವಾರ ಬಂಧಿಸಿದ್ದರು. ಆದರೆ ಅದೇ ದಿನ ಅವರಿಗೆ ಜಾಮೀನು ಸಿಕ್ಕಿದ್ದು, ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಪೊಲೀಸರ ಈ ಕ್ರಮ ಇದೀಗ ಜನರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಫುಟ್​ ಪಾತ್​ನಲ್ಲಿ ಮಲಗಿದ್ದ ವ್ಯಕ್ತಿಯನ್ನು ನುಜ್ಜುಗುಜ್ಜುಗೊಳಿಸಿತ್ತು. ಇದರಿಂದಾಗಿ ಆತ ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಮಾಧುರಿ ತಕ್ಷಣವೇ ಸ್ಥಳದಿಂದ ಓಡಿಹೋಗಿದ್ದಾರೆ ಎಂಬುದು ತಿಳಿದುಬಂದಿದೆ. ಆದರೆ ಅವರ ಸ್ನೇಹಿತರೊಬ್ಬರು ಕಾರಿನಿಂದ ಇಳಿದು ಅಪಘಾತದ ನಂತರ ಜಮಾಯಿಸಿದ ಜನರೊಂದಿಗೆ ಜಗಳವಾಡಲು ಪ್ರಾರಂಭಿಸಿದರು. ನಂತರ ಆತನೂ ಸ್ವಲ್ಪ ಸಮಯದ ನಂತರ ಅಲ್ಲಿಂದ ಹೊರಟು ಹೋದನು. ಗುಂಪಿನಲ್ಲಿದ್ದ ಕೆಲವರು ಸೂರ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಅವರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದರು.

ಮೃತ ವ್ಯಕ್ತಿಯ ಪತ್ನಿಯಿಂದ ದೂರು

ಸೂರ್ಯ ಮದುವೆಯಾಗಿ ಕೇವಲ 8 ತಿಂಗಳು ಕಳೆದಿತ್ತು. ಆತನ ಸಂಬಂಧಿಕರು ಮತ್ತು ನೆರೆಹೊರೆಯವರು ಶಾಸ್ತ್ರಿನಗರ ಪೊಲೀಸ್ ಠಾಣೆಯಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಚೆನ್ನೈನ ಬೆಸೆಂಟ್ ನಗರ ಪ್ರದೇಶದ ಪಾದಚಾರಿ ಮಾರ್ಗದ ಬಳಿ ಕುಡಿದು ರಸ್ತೆಬದಿಯಲ್ಲಿ ಮಲಗಿದ್ದ ಎನ್ನಲಾಗಿದೆ. ಸೂರ್ಯ ಅವರ ಪತ್ನಿ ವಿನಿತಾ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 304 (ಎ) (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT