ಭರ್ತೃಹರಿ ಮಹತಾಬ್  
ದೇಶ

ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ನೇಮಕ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತೀಯ ಜನತಾ ಪಕ್ಷದ ಸಂಸದ ಭರ್ತೃಹರಿ ಮಹತಾಬ್ ಅವರನ್ನು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಗುರುವಾರ ನೇಮಕ ಮಾಡಿದ್ದಾರೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತೀಯ ಜನತಾ ಪಕ್ಷದ ಸಂಸದ ಭರ್ತೃಹರಿ ಮಹತಾಬ್ ಅವರನ್ನು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಗುರುವಾರ ನೇಮಕ ಮಾಡಿದ್ದಾರೆ.

ಒಡಿಶಾದ ಬಿಜೆಪಿಯ ಪ್ರಮುಖ ನಾಯಕ ಭರ್ತೃಹರಿ ಮಹತಾಬ್ ಅವರು ಸ್ಪೀಕರ್ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ನೂತನ ಸಭಾಧ್ಯಕ್ಷರ ಆಯ್ಕೆಯಾಗುವವರೆಗೆ ಸ್ಪೀಕರ್ ಕರ್ತವ್ಯಗಳನ್ನು ನಿರ್ವಹಿಸಲು ಸಂವಿಧಾನದ 95 (1) ನೇ ವಿಧಿಯ ಅಡಿಯಲ್ಲಿ ಹಂಗಾಮಿ ಸ್ಪೀಕರ್ ಆಗಿ ಲೋಕಸಭೆಯ ಸದಸ್ಯ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಂಗಾಮಿ ಸ್ಪೀಕರ್ ಹುದ್ದೆಯನ್ನು ಲೋಕಸಭೆಯ ಸಂಪ್ರದಾಯದಂತೆ ಸಂಸತ್ತಿನ ಹಿರಿಯ ಸದಸ್ಯರಿಗೆ ನೀಡಲಾಗುತ್ತದೆ. ಸ್ಪೀಕರ್ ಹುದ್ದೆಗೆ ಸೂಕ್ತ ಅಭ್ಯರ್ಥಿಯ ಆಯ್ಕೆಯಾಗುವುದಕ್ಕೂ ಮುನ್ನ ಹಂಗಾಮಿ ಸ್ಪೀಕರ್ ಅವರು ಪ್ರಧಾನಿ, ಕೇಂದ್ರ ಸಚಿವರಿಗೆ ಮತ್ತು ಎಲ್ಲ ಸಂಸದರಿಗೆ ಪ್ರಮಾಣ ವಚನ ಬೋಧಿಸುವ ಕರ್ತವ್ಯ ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT