ಮುದುಕನ ವೇಷ ಧರಿಸಿ ಪ್ರಯಾಣಿಸುತ್ತಿದ್ದ 24ರ ಯುವಕ 
ದೇಶ

Passport Forgery Case: ಗಡ್ಡಕ್ಕೆ ಬಣ್ಣಹಚ್ಚಿ ಮುದುಕನ ವೇಷ ಧರಿಸಿ ಪ್ರಯಾಣಿಸುತ್ತಿದ್ದ 24ರ ಯುವಕ ವಿಮಾನ ನಿಲ್ದಾಣದಲ್ಲೇ ಬಂಧನ!

ಗಡ್ಡಕ್ಕೆ ಬಣ್ಣಹಚ್ಚಿ ಮುದುಕನ ವೇಷ ಧರಿಸಿ ನಕಲಿ ಪಾಸ್ ಪೋರ್ಟ್ ನಲ್ಲಿ ಪ್ರಯಾಣಿಸಲು ಯತ್ನಿಸುತ್ತಿದ್ದ ಯುವಕೊಬ್ಬನನ್ನು ಸಿಐಎಸ್ಎಫ್ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.

ನವದೆಹಲಿ: ಗಡ್ಡಕ್ಕೆ ಬಣ್ಣಹಚ್ಚಿ ಮುದುಕನ ವೇಷ ಧರಿಸಿ ನಕಲಿ ಪಾಸ್ ಪೋರ್ಟ್ ನಲ್ಲಿ ಪ್ರಯಾಣಿಸಲು ಯತ್ನಿಸುತ್ತಿದ್ದ ಯುವಕೊಬ್ಬನನ್ನು ಸಿಐಎಸ್ಎಫ್ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.

ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ನಕಲಿ ಪಾಸ್‌ಪೋರ್ಟ್‌ (Passport Forgery Case) ಪ್ರಕರಣದಡಿಯಲ್ಲಿ ಯುವಕನೊಬ್ಬನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೆನಡಾಕ್ಕೆ ಪ್ರಯಾಣಿಸುತ್ತಿದ್ದ ಯುವಕನನ್ನು ಸಿಐಎಸ್ ಎಫ್ ತಂಡ ಆತನ ಅನುಮಾನಾಸ್ಪದ ನಡೆಯ ಹಿನ್ನೆಲೆ ವಿಚಾರಣೆ ನಡೆಸಿ ಬಂಧಿಸಿದೆ. ಬಂಧಿತನನ್ನು 24 ವರ್ಷದ ಗುರುಸೇವಕ್‌ ಸಿಂಗ್‌ ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಪ್ರಯಾಣಿಕ ಗುರು ಸೇವಕ್ ಸಿಂಗ್(24) ಗಡ್ಡ ಮತ್ತು ಕೂದಲಿಗೆ ಬಣ್ಣ ಹಚ್ಚಿ 67 ವರ್ಷದ ವ್ಯಕ್ತಿಯ ವೇಷ ಧರಿಸಿ ರಶ್ಮಿಂದರ್ ಸಿಂಗ್ ಸಹೋಟಾ ಎಂಬ ಹೆಸರಿನ ಪಾಸ್ ಪೋರ್ಟ್ ತೋರಿಸಿ ಮಂಗಳವಾರ ದೆಹಲಿಯಿಂದ ಹೊರಡುವ ಏರ್ ಕೆನಡಾ ವಿಮಾನ ಹತ್ತಿ ಕೆನಡಕ್ಕೆ ಪ್ರಯಾಣಿಸುವ ಪ್ಲ್ಯಾನ್ ಮಾಡಿದ್ದನು. ಆದರೆ ಅವನ ಚಟುವಟಿಕೆಗಳು ಮತ್ತು ನಡೆ ಅನುಮಾನಾಸ್ಪದವೆಂದು ಕಂಡು ಬಂದ ಹಿನ್ನಲೆಯಲ್ಲಿ ಆತನನ್ನು ಮೊದಲು ಸಿಐಎಸ್ ಎಫ್ ಸಿಬ್ಬಂದಿ ಪರಿಶೀಲಿಸಿದರು.

ವ್ಯಕ್ತಿಯ ನೋಟ, ಧ್ವನಿ ಮತ್ತು ಚರ್ಮದ ವಿನ್ಯಾಸವು ಪಾಸ್ ಪೋರ್ಟ್ ನಲ್ಲಿ ತಿಳಿಸಿದ ವಿವರಗಳಿಗೆ ಭಿನ್ನವಾಗಿತ್ತು. ಸೂಕ್ಷ್ಮವಾಗಿ ನೋಡಿದರೆ ಆತನ ಗಡ್ಡ ಮತ್ತು ಕೂದಲಿಗೆ ಬಣ್ಣಹಚ್ಚಿದ್ದು, ವಯಸ್ಸಾದವರಂತೆ ಕಾಣಲು ಕನ್ನಡಕ ಧರಿಸಿದ್ದನು ಎಂಬುದನ್ನು ಅವರು ಗಮನಿಸಿದರು.

ಕೂಡಲೇ ಆತನನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆಗೊಳಪಡಿಸಿದಾಗ ಆತ ಸತ್ಯಾಂಶ ಬಾಯ್ಬಿಟ್ಟಿದ್ದಾನೆ. ಹಾಗೆಯೇ ಆತನನ್ನು ಸಂಪೂರ್ಣವಾಗಿ ಪರಿಶೀಲಿಸಿದಾಗ ಆತನ ನಿಜವಾದ ಹೆಸರಿನ ಪಾಸ್ ಪೋರ್ಟ್ ಅವನ ಮೊಬೈಲ್ ನಲ್ಲಿತ್ತು ಎನ್ನಲಾಗಿದೆ. ಹಾಗಾಗಿ ಈ ಪ್ರಕರಣವು ನಕಲಿ ಪಾಸ್ ಪೋರ್ಟ್ ಗೆ ಸಂಬಂಧಿಸಿದ್ದಾದ್ದರಿಂದ ಸಿಐಎಸ್ ಎಫ್ ಆತನನ್ನು ಬಂಧಿಸಿ ಕಾನೂನಿನ ಕ್ರಮದಂತೆ ಆತನನ್ನು‌ ಹಾಗೂ ಆತನ ವಸ್ತುಗಳೊಂದಿಗೆ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT