ಪ್ರಧಾನಿ ಮೋದಿ  
ದೇಶ

ಪ್ರಧಾನಿ ಮೋದಿ ಎರಡು ದಿನಗಳ ಜಮ್ಮು-ಕಾಶ್ಮೀರ ಭೇಟಿ: ರೆಡ್ ಝೋನ್, ಬಹು ಹಂತದ ಭದ್ರತೆ

ಇಂದು ಗುರುವಾರದಿಂದ ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ.

ಶ್ರೀನಗರ: ಇಂದು ಗುರುವಾರದಿಂದ ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ.

ಪ್ರಧಾನಿಯವರಿಗೆ ಬಹು ಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಇದು ಬಹು ಹಂತದ ಭದ್ರತೆಯಾಗಿದೆ. ಭದ್ರತಾ ಶಿಷ್ಟಾಚಾರಗಳ ಪ್ರಕಾರ, ಇಲ್ಲಿ ಹೈ-ಅಲರ್ಟ್ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಧಿ ಕುಮಾರ್ ಬಿರ್ಡಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಶ್ರೀನಗರ ಪೊಲೀಸರು ಡ್ರೋನ್‌ಗಳು ಮತ್ತು ಕ್ವಾಡ್‌ಕಾಪ್ಟರ್‌ಗಳ ಕಾರ್ಯಾಚರಣೆಗಾಗಿ ನಗರವನ್ನು 'ತಾತ್ಕಾಲಿಕ ರೆಡ್ ಝೋನ್ ಎಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ. ರೆಡ್ ಝೋನ್‌ನಲ್ಲಿನ ಎಲ್ಲಾ ಅನಧಿಕೃತ ಡ್ರೋನ್ ಕಾರ್ಯಾಚರಣೆಗಳು ಡ್ರೋನ್ ನಿಯಮಗಳು, 2021 ರ ಸಂಬಂಧಿತ ನಿಬಂಧನೆಗಳ ಪ್ರಕಾರ ದಂಡನೆಗೆ ಒಳಗಾಗುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಇಂದು ಶ್ರೀನಗರ ತಲುಪಲಿದ್ದು, ಸಂಜೆ 6 ಗಂಟೆಗೆ ಅಲ್ಲಿನ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕಾನ್ಫರೆನ್ಸ್ ಸೆಂಟರ್‌ನಲ್ಲಿ (SKICC) 'ಯುವಜನತೆಯ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರದ ಪರಿವರ್ತನೆ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಅವರು ಜಮ್ಮು-ಕಾಶ್ಮೀರದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಸ್ಪರ್ಧಾತ್ಮಕತೆ ಸುಧಾರಣೆ ಯೋಜನೆಗೆ (JKCIP) ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT