ದೇಶ

NEET-UG 2024 ವಿವಾದ: ಜುಲೈ 8ರಂದು ಸುಪ್ರೀಂ ಕೋರ್ಟ್ ವಿಚಾರಣೆ; ಕೇಂದ್ರ ಸರ್ಕಾರ, NTA ಗೆ ನೊಟೀಸ್

NEET-UG, 2024ಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಲ್ಲಿಸಿದ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: NEET-UG, 2024ಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಲ್ಲಿಸಿದ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣಗಳಲ್ಲಿ ಹೈಕೋರ್ಟ್‌ನ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನಿಲ್ಲಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಪುನರುಚ್ಛರಿಸಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮತ್ತು ಇತರ ಅರ್ಜಿದಾರರು ಸಲ್ಲಿಸಿರುವ ಅರ್ಜಿಗಳನ್ನು ಜುಲೈ 8 ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

NEET-UG ಪರೀಕ್ಷೆಗೆ ಮೇಘಾಲಯ ಕೇಂದ್ರದಲ್ಲಿ ಹಾಜರಾಗಿದ್ದ ತಮಗೆ 45 ನಿಮಿಷ ವ್ಯರ್ಥವಾಗಿ ಕಳೆದುಹೋಗಿತ್ತು. ಗ್ರೇಸ್ ಅಂಕಗಳನ್ನು ಪಡೆದು ಜೂನ್ 23ರಂದು ಮರು ಪರೀಕ್ಷೆಗೆ ಅವಕಾಶ ನೀಡಿದ್ದ 1,563 ವಿದ್ಯಾರ್ಥಿಗಳ ಜೊತೆ ತಮ್ಮನ್ನು ಸಹ ಸೇರಿಸಬೇಕೆಂದು ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು NTA ಗೆ ನೋಟಿಸ್ ಜಾರಿ ಮಾಡಿದೆ.

NEET-UG 2024ನ್ನು ರದ್ದುಗೊಳಿಸುವಂತೆ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಕೇಂದ್ರ ಸರ್ಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮತ್ತು ಇತರರಿಂದ ಪ್ರತಿಕ್ರಿಯೆಗಳನ್ನು ಕೇಳಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್‌ವಿಎನ್ ಭಟ್ಟಿ ಅವರ ರಜಾಕಾಲದ ಪೀಠವು ಹೈಕೋರ್ಟ್‌ಗಳಿಂದ ಕೆಲವು ಬಾಕಿ ಇರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಲು ಎನ್‌ಟಿಎ ಸಲ್ಲಿಸಿದ ಪ್ರತ್ಯೇಕ ಅರ್ಜಿಗಳ ಬಗ್ಗೆ ಕಕ್ಷಿದಾರರಿಂದ ಪ್ರತಿಕ್ರಿಯೆಗಳನ್ನು ಕೇಳಿದೆ.

ಜುಲೈ 8ಕ್ಕೆ ನ್ಯಾಯಪೀಠವು ಈ ಅರ್ಜಿಗಳನ್ನು ವಿಚಾರಣೆಗೆ ಮುಂದೂಡಿತು. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾಣಿಸಿಕೊಂಡ 20 ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳಲ್ಲಿ ಒಂದಾದ ಎನ್‌ಟಿಎ ಮತ್ತು ಇತರರಿಗೆ ಪರೀಕ್ಷೆಯನ್ನು ಹೊಸದಾಗಿ ನಡೆಸಲು ನಿರ್ದೇಶನವನ್ನು ಕೋರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT