ಮೃತರ ಸಾಮೂಹಿಕ ಅಂತ್ಯಕ್ರಿಯೆಗೆ ತಯಾರಿ 
ದೇಶ

ತಮಿಳುನಾಡು ಅಕ್ರಮ ಮದ್ಯ ದುರಂತ: ಸಾವಿನ ಸಂಖ್ಯೆ 37ಕ್ಕೆ ಏರಿಕೆ; ಇನ್ನೂ ಹೆಚ್ಚಾಗುವ ಸಾಧ್ಯತೆ

ರಾಜಧಾನಿ ಚೆನ್ನೈನಿಂದ ಸುಮಾರು 240 ಕಿಮೀ ದೂರದಲ್ಲಿರುವ ತಮಿಳುನಾಡಿನ ಕಲ್ಲಕುರಿಚಿ ಪಟ್ಟಣದಲ್ಲಿ ದುಃಖ ಮಡುಗಟ್ಟಿದೆ.

ಚೆನ್ನೈ: ರಾಜಧಾನಿ ಚೆನ್ನೈನಿಂದ ಸುಮಾರು 240 ಕಿಮೀ ದೂರದಲ್ಲಿರುವ ತಮಿಳುನಾಡಿನ ಕಲ್ಲಕುರಿಚಿ ಪಟ್ಟಣದಲ್ಲಿ ದುಃಖ ಮಡುಗಟ್ಟಿದೆ. ಬುಧವಾರದ ಅಕ್ರಮ ಮದ್ಯ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 37 ಕ್ಕೆ ಏರಿದೆ ಮತ್ತು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿತ್ತು. ಸಂತ್ರಸ್ತರಲ್ಲಿ ಹೆಚ್ಚಿನವರು ದಿನಗೂಲಿ ಕಾರ್ಮಿಕರಾಗಿದ್ದು, ಅವರು ಟಾಸ್ಮಾಕ್(ತಮಿಳುನಾಡು ಸ್ಟೇಟ್ ಮಾರ್ಕೆಟಿಂಗ್ ಕಾರ್ಪೊರೇಷನ್) ಮಳಿಗೆಗಳಲ್ಲಿ ಮಾರಾಟವಾಗುವ ಭಾರತೀಯ ನಿರ್ಮಿತ ವಿದೇಶಿ ಮದ್ಯ ಖರೀದಿಸಲು ಸಾಧ್ಯವಿಲ್ಲ. ಆದ್ದರಿಂದ, ಅವರು ಅಗ್ಗದ ದರದಲ್ಲಿ ದೊರೆಯುವ ನಕಲಿ ಮದ್ಯವನ್ನು ಅವಲಂಬಿಸಿದ್ದಾರೆ. ಸಂತ್ರಸ್ತರು ಎರಡು ಗುಡಿಸಲುಗಳಲ್ಲಿ ಮಾರಾಟ ಮಾಡುತ್ತಿದ್ದ ಅಕ್ರಮ ಮದ್ಯವನ್ನು ಸೇವಿಸಿ ಅಸ್ವಸ್ಥರಾಗಿದ್ದರು.

ದುರಂತಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದ್ದು, ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಮದ್ಯ ಮಾದರಿಗಳಲ್ಲಿ ಮಾರಣಾಂತಿಕ ಮೆಥನಾಲ್ ಇರುವಿಕೆಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಜಿ ಪ್ರವೀಣ್‌ಕುಮಾರ್ (26), ಡಿ ಸುರೇಶ್ (40), ಕೆ ಶೇಖರ್ (59), ಎಸ್ ವಡಿವುಕ್ಕರಸಿ, ಸಿ ಕಂದನ್, ಪಿ ಜಗದೀಶನ್, ಆರ್ ಸುರೇಶ್, ಎಂ ಸೆಲ್ವಂ ಮತ್ತು ಎಂ ಆರುಮುಗಂ ಎಂದು ಗುರುತಿಸಲಾಗಿದೆ. ಇತರ ಸಂತ್ರಸ್ತರ ಹೆಸರುಗಳನ್ನು ಇನ್ನೂ ದೃಢೀಕರಿಸಲಾಗಿಲ್ಲ.

ಮೂಲಗಳ ಪ್ರಕಾರ ಒಟ್ಟು 107 ಜನರನ್ನು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 59 ಜನರನ್ನು ಸೇಲಂ, ವಿಲ್ಲುಪುರಂ ಮತ್ತು ಪುದುಚೇರಿಯಂತಹ ಇತರ ಸ್ಥಳಗಳ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಉಲ್ಲೇಖಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ತಿಳಿಸಿದೆ.

ಸಿಬಿಸಿಐಡಿಯಿಂದ ಪ್ರಕರಣದ ತನಿಖೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪ್ರಕರಣದ ತನಿಖೆ ನಡೆಸುವಂತೆ ಸಿಬಿಸಿಐಡಿ ಆದೇಶಿಸಿದ್ದಾರೆ. ಸಚಿವರೊಂದಿಗೆ ಪರಿಶೀಲನಾ ಸಭೆಯನ್ನೂ ನಡೆಸಿದ್ದು,

ಈ ಕುರಿತು ತನಿಖೆ ನಡೆಸಲು ಸಿಬಿಸಿಐಡಿ ಹಲವು ತಂಡಗಳನ್ನು ರಚಿಸಿದೆ.

ಪ್ರಯೋಗಾಲಯದ ಪರೀಕ್ಷೆಯು ಅರಕ್ ಮಾದರಿಗಳಲ್ಲಿ ಮಾರಣಾಂತಿಕ ಮೆಥನಾಲ್ ಇರುವಿಕೆಯನ್ನು ತೋರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT