ಸೇತುವೆಯನ್ನು ಪರಿಶೀಲಿಸಿದ ನಾನಾ ಪಟೋಳೆ 
ದೇಶ

ಅಟಲ್ ಸೇತು ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು, ಭ್ರಷ್ಟಾಚಾರದ ವಾಸನೆ: ಕಾಂಗ್ರೆಸ್

ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆ ಅಟಲ್ ಸೇತು ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ.

ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆ ಅಟಲ್ ಸೇತು ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಶುಕ್ರವಾರ ಆರೋಪಿಸಿದ್ದಾರೆ.

ಸೇತುವೆ ಉದ್ಘಾಟನೆಗೊಂಡ ಕೆಲವೇ ತಿಂಗಳೊಳಗೆ ಅದರಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದೆ ಎಂದು ಪಟೋಳೆ ಹೇಳಿದ್ದಾರೆ.

ಇಂದು ಹಗಲಿನಲ್ಲಿ ಸೇತುವೆಯನ್ನು ಪರಿಶೀಲಿಸಿದ ಪಟೋಳೆ, ಸೇತುವೆಯ ನಿರ್ಮಾಣ ಗುಣಮಟ್ಟ ಕಳಪೆಯಾಗಿದೆ ಮತ್ತು ರಸ್ತೆಯ ಒಂದು ಭಾಗವು ಒಂದು ಅಡಿಯಷ್ಟು ಕುಸಿದಿದೆ ಎಂದು ಪ್ರತಿಪಾದಿಸಿದರು.

ಸೇತುವೆಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಳೆ, ರಾಜ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲ ಮಿತಿಗಳನ್ನು ದಾಟಿ ಜನರ ಜೀವವನ್ನು ಅಪಾಯಕ್ಕೆ ಸಿಲುಕಿಸಿದೆ. ಅಟಲ್ ಸೇತು ಸೇತುವೆಯ ಒಂದು ಭಾಗದಲ್ಲಿ ಉದ್ಘಾಟನೆಯಾದ ಮೂರು ತಿಂಗಳೊಳಗೆ ಬಿರುಕು ಕಾಣಿಸಿಕೊಂಡಿದೆ ಮತ್ತು ನವಿ ಮುಂಬೈ ಬಳಿಯ ಅರ್ಧ ಕಿಲೋಮೀಟರ್ ಉದ್ದದ ರಸ್ತೆಯು ಒಂದು ಅಡಿಯಷ್ಟು ಕುಸಿದಿದೆ ಎಂದು ಆರೋಪಿಸಿದರು.

ಆದರೆ, ಆಡಳಿತಾರೂಢ ಭಾರತೀಯ ಜನತಾ ಪಕ್ಷ ಹಾಗೂ ಯೋಜನೆಯ ನೋಡಲ್ ಏಜೆನ್ಸಿಯಾಗಿರುವ ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬಿರುಕು ಬಿಟ್ಟಿರುವುದು ಸೇತುವೆಯ ಮೇಲೆ ಅಲ್ಲ, ನವಿ ಮುಂಬೈನ ಉಲ್ವೆಯಿಂದ ಬರುವ ರಸ್ತೆಯಲ್ಲಿ ಎಂದು ಹೇಳಿದೆ.

ಮುಂಬೈ ಟ್ರಾನ್ಸ್-ಹಾರ್ಬರ್ ಲಿಂಕ್ ಎಂದೂ ಕರೆಯಲ್ಪಡುವ 'ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತು' ಅನ್ನು ಈ ವರ್ಷದ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು.

17,840 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಈ ಆರು ಪಥಗಳ ಸೇತುವೆಯು 21.8 ಕಿಮೀ ಉದ್ದವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT