ಪೆಟ್ರೋಲ್ ದರ ಏರಿಕೆ (ಸಾಂದರ್ಭಿಕ ಚಿತ್ರ) 
ದೇಶ

Petrol Price hike in Goa: ಕರ್ನಾಟಕದ ಬೆನ್ನಲ್ಲೇ ಗೋವಾದಲ್ಲೂ ಇಂಧನ ದರ ಏರಿಕೆ: ನಾಳೆಯಿಂದಲೇ ಜಾರಿ!

ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ಬಿಜೆಪಿ ನಾಯಕರಿಗೆ ಶಾಕ್ ನೀಡುವಂತೆ ಗೋವಾದ ಬಿಜೆಪಿ ಸರ್ಕಾರ ಕೂಡ ಶುಕ್ರವಾರ ಇಂಧನ ದರ ಏರಿಕೆ ಮಾಡಿದೆ.

ಪಣಜಿ: ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ಬಿಜೆಪಿ ನಾಯಕರಿಗೆ ಶಾಕ್ ನೀಡುವಂತೆ ಗೋವಾದ ಬಿಜೆಪಿ ಸರ್ಕಾರ ಕೂಡ ಶುಕ್ರವಾರ ಇಂಧನ ದರ ಏರಿಕೆ ಮಾಡಿದೆ.

ಹೌದು.. ನಾಳೆಯಿಂದ ಗೋವಾದಲ್ಲಿ ಪೆಟ್ರೋಲ್ ಬೆಲೆ 1 ರೂಪಾಯಿ, ಡೀಸೆಲ್ 36 ಪೈಸೆ ಏರಿಕೆಯಾಗಲಿದ್ದು, ಗೋವಾ ಸರ್ಕಾರ ಶನಿವಾರದಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ.

ಇದು ಪೆಟ್ರೋಲ್ ಬೆಲೆಯನ್ನು 1 ರೂಪಾಯಿ ಮತ್ತು ಡೀಸೆಲ್ ಬೆಲೆಯನ್ನು 36 ಪೈಸೆಗಳಷ್ಟು ಹೆಚ್ಚಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಹೆಚ್ಚಳದ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ (ಹಣಕಾಸು) ಪ್ರಣಬ್ ಜಿ ಭಟ್ ಅವರು ಶುಕ್ರವಾರ ಅಧಿಸೂಚನೆಯನ್ನು ಹೊರಡಿಸಿದ್ದು, “ವ್ಯಾಟ್ ಹೆಚ್ಚಳ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 1 ಮತ್ತು 36 ಪೈಸೆಗಳಷ್ಟು ಹೆಚ್ಚಾಗುತ್ತದೆ. ಗೋವಾದಲ್ಲಿ ಪ್ರಸ್ತುತ ಪೆಟ್ರೋಲ್ ಬೆಲೆ ಲೀಟರ್‌ಗೆ 95.40 ರೂ ಆಗಿದ್ದು, ಡೀಸೆಲ್‌ಗೆ 87.90 ರೂ ಇದೆ ಎಂದು ಅವರು ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಯೂರಿ ಅಲೆಮಾವೊ ಅವರು ಇದನ್ನು "ಸಂವೇದನಾಶೀಲ ರಹಿತ ಸರ್ಕಾರ" ಎಂದು ಟೀಕಿಸಿದ್ದಾರೆ. ಅಲ್ಲದೆ ತಕ್ಷಣವೇ ಹೆಚ್ಚಳವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಅಂತೆಯೇ ಪ್ರಮೋದ್ ಸಾವಂತ್ ನೇತೃತ್ವದ ಗೋವಾ ಬಿಜೆಪಿ ಸರ್ಕಾರ ಇಂತಹ ಏರಿಕೆಗಳನ್ನು ಮಾಡುವ ಬದಲು ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು. ದರ ಏರಿಕೆ ಮೂಲಕ ಗೋವಾ ಸರ್ಕಾರವು ಸಾಮಾನ್ಯ ಜನರ ಬೆನ್ನು ಮುರಿಯಲು ಬಯಸಿದ್ದು, ಇತ್ತೀಚೆಗೆ ಇಂಧನ ದರ ಏರಿಕೆ ಮಾಡಿತ್ತು. ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT