ತೇಜಸ್ವಿ ಯಾದವ್ 
ದೇಶ

ನೀಟ್ ಪೇಪರ್ ಸೋರಿಕೆ ಹಗರಣದಲ್ಲಿ ಭಾಗಿ ಆರೋಪ ತಳ್ಳಿಹಾಕಿದ ತೇಜಸ್ವಿ ಯಾದವ್

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ನೀಟ್ ಪೇಪರ್ ಸೋರಿಕೆ ಹಗರಣದಲ್ಲಿ ತಾವು ಭಾಗಿಯಾಗಿರುವ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಪಾಟ್ನಾ: ಬಿಹಾರ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ನೀಟ್ ಪೇಪರ್ ಸೋರಿಕೆ ಹಗರಣದಲ್ಲಿ ತಾವು ಭಾಗಿಯಾಗಿರುವ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಆಡಳಿತಾರೂಢ ಎನ್‌ಡಿಎ ನಾಯಕರು ನೀಟ್ ಹಗರಣದಿಂದ ಗಮನ ಬೇರೆಡೆಗೆ ತಿರುಗಿಸಲು ಮತ್ತು ಆರೋಪಿಗಳನ್ನು ರಕ್ಷಿಸಲು ತಮ್ಮ ಹೆಸರನ್ನು ಲಿಂಕ್ ಮಾಡುತ್ತಿದ್ದಾರೆ ಎಂದು ತೇಜಸ್ವಿ ಯಾದವ್ ಅವರು ಹೇಳಿದ್ದಾರೆ.

"ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನನ್ನ ಪಿಎ ಅಥವಾ ಪಿಎಸ್‌ಗೆ ಕರೆ ಮಾಡಿ ವೈಯಕ್ತಿಕವಾಗಿ ವಿಚಾರಣೆ ನಡೆಸಬಹುದು" ಎಂದು ತೇಜಸ್ವಿ ತಮ್ಮ ಸಹಾಯಕರು ಪ್ರಕರಣದಲ್ಲಿ ಆರೋಪಿಗೆ ಸಹಾಯ ಮಾಡಿದ್ದಾರೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಮತ್ತು ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಮತ್ತು ಬಿಹಾರ ಸಚಿವ ಶರ್ವಣ್ ಕುಮಾರ್ ಸೇರಿದಂತೆ ಕೆಲವು ಜೆಡಿ-ಯು ನಾಯಕರು, ಪ್ರತಿಪಕ್ಷ ನಾಯಕ ನೀಟ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ನಿನ್ನೆ ಆರೋಪಿಸಿದ್ದರು.

ಈ ಬಗ್ಗೆ ಇಂದು ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್, "ನಾನು ತನಿಖೆಗೆ ಸಿದ್ಧನಿದ್ದೇನೆ ಮತ್ತು ಮುಚ್ಚಿಡಲು ಏನೂ ಇಲ್ಲ" ಎಂದು ಹೇಳಿದರು.

ತೇಜಸ್ವಿ ಯಾದವ್ ಅವರ ಮಾಜಿ ಆಪ್ತ ಸಹಾಯಕ ಪ್ರೀತಮ್ ಕುಮಾರ್ ಅವರು ಮೇ ಮೊದಲ ವಾರದಲ್ಲಿ ಆರೋಪಿಗಳಲ್ಲಿ ಒಬ್ಬರಿಗೆ ಅತಿಥಿ ಗೃಹದಲ್ಲಿ ಕೊಠಡಿ ಕಾಯ್ದಿರಿಸಲು ಪ್ರಯತ್ನಿಸಿದ್ದಾರೆ ಎಂದು ಜೆಡಿ-ಯು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT