ದೇಶ

ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್‌ಗೆ ಗೆಲುವು; ಹೆಸರು ಬದಲಿಸಿಕೊಂಡ YSRCP ನಾಯಕ

ಪೀಠಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪವನ್ ಕಲ್ಯಾಣ್ ಗೆಲುವು ಸಾಧಿಸಿದ ನಂತರ ಪದ್ಮನಾಭಂ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ.

ಅಮರಾವತಿ: ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಸೋಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ನೀಡಿದ ಮಾತಿಗೆ ತಕ್ಕಂತೆ ವೈಎಸ್‌ಆರ್‌ಸಿಪಿಯ ಹಿರಿಯ ನಾಯಕ ಮುದ್ರಗಡ ಪದ್ಮನಾಭಂ ಅವರು ಅಧಿಕೃತವಾಗಿ ತಮ್ಮ ಹೆಸರನ್ನು 'ಪದ್ಮನಾಭ ರೆಡ್ಡಿ' ಎಂದು ಬದಲಾಯಿಸಿಕೊಂಡಿದ್ದಾರೆ.

ಪೀಠಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪವನ್ ಕಲ್ಯಾಣ್ ಗೆಲುವು ಸಾಧಿಸಿದ ನಂತರ ಪದ್ಮನಾಭಂ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ.

ಚುನಾವಣಾ ಪೂರ್ವದಲ್ಲಿ ಪವನ್ ಕಲ್ಯಾಣ್ ಅವರನ್ನು ಸೋಲಿಸುವುದಾಗಿ ವೈಎಸ್‌ಆರ್‌ಸಿಪಿ ನಾಯಕ ಸವಾಲು ಹಾಕಿದ್ದರು.

ನನ್ನ ಹೆಸರನ್ನು ಬದಲಾಯಿಸಿಕೊಳ್ಳಲು ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ. ನನ್ನ ಸ್ವಂತ ಇಚ್ಛೆಯಿಂದ ಬದಲಾಯಿಸಿದ್ದೇನೆ ಎಂದು ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ, ಜನಸೇನಾ ಮುಖ್ಯಸ್ಥರ ಅಭಿಮಾನಿಗಳು ಹಾಗೂ ಅನುಯಾಯಿಗಳು ನಿಂದನೆ ಮಾಡುತ್ತಿದ್ದಾರೆ ಎಂದು ದೂರಿದರು.

ನಿಮ್ಮನ್ನು (ಪವನ್ ಕಲ್ಯಾಣ್) ಪ್ರೀತಿಸುವ ಯುವಕರು ನಿರಂತರವಾಗಿ ಅಪಪ್ರಚಾರದ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ. ನನ್ನ ದೃಷ್ಟಿಯಲ್ಲಿ ಇದು ಸರಿಯಲ್ಲ. ಈ ರೀತಿ ಮಾಡುವ ಬದಲು, ಒಂದು ಕೆಲಸ ಮಾಡಿ ನಮ್ಮನ್ನು (ಕುಟುಂಬದ ಎಲ್ಲ ಸದಸ್ಯರು) ತೊಡೆದುಹಾಕಿ ಎಂದು ರೆಡ್ಡಿ ಹೇಳಿದ್ದಾರೆ.

ರೆಡ್ಡಿ ಅವರು ಕಾಪು ಸಮುದಾಯದ ಪ್ರಮುಖ ನಾಯಕರಾಗಿದ್ದು, ಕಾಪು ಮೀಸಲಾತಿಗಾಗಿ ಒತ್ತಾಯಿಸಿದ್ದರು. ಅವರು ಚುನಾವಣೆಗೆ ಕೆಲವು ತಿಂಗಳುಗಳ ಮೊದಲು ವೈಎಸ್‌ಆರ್‌ಸಿಪಿಗೆ ಸೇರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT