ಎನ್ಇಇಟಿ ಹಗರಣದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ 
ದೇಶ

NEET ಹಗರಣದ ನಡುವೆ ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು ಜಾರಿಗೊಳಿಸಿದ ಕೇಂದ್ರ

NEET ಹಗರಣದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು ಜಾರಿ ಮಾಡಿದೆ.

ನವದೆಹಲಿ: NEET ಹಗರಣದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು ಜಾರಿ ಮಾಡಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮ ತಡೆಗಟ್ಟುವ ಕಾನೂನು ಜೂ.21 ರಿಂದಲೇ ಜಾರಿಗೆ ಬಂದಿದೆ. ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ, 2024 ಭಾರತದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಶಾಸನವಾಗಿದ್ದು, ವಂಚನೆಯನ್ನು ತಡೆಯುವ ಮತ್ತು ಸಾರ್ವಜನಿಕ ಪರೀಕ್ಷೆಗಳ ಸಮಗ್ರತೆಯನ್ನು ಎತ್ತಿಹಿಡಿಯುವ ಗುರಿಯನ್ನು ಹೊಂದಿದೆ.

ಫೆಬ್ರವರಿ 9, 2024 ರಂದು ಸಂಸತ್ ಅಂಗೀಕರಿಸಿದ ಕಾನೂನಿನ ಪ್ರಕಾರ, ಪರೀಕ್ಷಾ ಅಕ್ರಮಗಳಿಗೆ ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವ, ಅನ್ಯಾಯ ವಿಧಾನಗಳನ್ನು ಆಶ್ರಯಿಸುವವ ತಪ್ಪಿತಸ್ಥರಿಗೆ ರೂ 10 ಲಕ್ಷದವರೆಗೆ ದಂಡದೊಂದಿಗೆ ಜೈಲು ಶಿಕ್ಷೆಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದಾಗಿದೆ. ಕಾಯಿದೆಯಡಿಯಲ್ಲಿರುವ ಎಲ್ಲಾ ಅಪರಾಧಗಳು ಗಂಭಿರ ಮತ್ತು ಜಾಮೀನು ರಹಿತವಾಗಿರುತ್ತದೆ.

"ಕಾಯಿದೆಯ ಪ್ರಕಾರ (i) ಅನಧಿಕೃತ ಪ್ರವೇಶ ಅಥವಾ ಪ್ರಶ್ನೆ ಪತ್ರಿಕೆ ಅಥವಾ ಉತ್ತರ ಕೀ ಸೋರಿಕೆ, (ii) ಸಾರ್ವಜನಿಕ ಪರೀಕ್ಷೆಯ ಸಮಯದಲ್ಲಿ ಅಭ್ಯರ್ಥಿಗೆ ಸಹಾಯ ಮಾಡುವುದು, (iii) ಕಂಪ್ಯೂಟರ್ ನೆಟ್‌ವರ್ಕ್ ಅಥವಾ ಸಂಪನ್ಮೂಲಗಳನ್ನು ತಿದ್ದುವುದು, (iv) ಅರ್ಹತಾ ಪಟ್ಟಿ ಅಥವಾ ಶ್ರೇಣಿಯನ್ನು ಶಾರ್ಟ್‌ಲಿಸ್ಟ್ ಮಾಡಲು ಅಥವಾ ಅಂತಿಮಗೊಳಿಸಲು ದಾಖಲೆಗಳೊಂದಿಗೆ ಟ್ಯಾಂಪರಿಂಗ್ ಮಾಡುವುದು, ಮತ್ತು (v) ನಕಲಿ ಪರೀಕ್ಷೆಯನ್ನು ನಡೆಸುವುದು, ನಕಲಿ ಪ್ರವೇಶ ಕಾರ್ಡ್‌ಗಳನ್ನು ನೀಡುವುದು ಅಥವಾ ಮೋಸ ಮಾಡಲು ಪತ್ರಗಳನ್ನು ನೀಡುವುದು ಕಾಯ್ದೆ ಪ್ರಕಾರ ಅಪರಾಧವಾಗಿದೆ.

ಸಂಘಟಿತ ಪ್ರಶ್ನೆ ಪತ್ರಿಕೆ ಸೋರಿಕೆ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಸಂಸ್ಥೆಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ನಿಬಂಧನೆಗಳನ್ನು ಹೊಂದಿದೆ ಮತ್ತು ಪರೀಕ್ಷೆಯ ಪ್ರಮಾಣಾನುಗುಣವಾದ ವೆಚ್ಚವನ್ನು ಸಹ ಅದರಿಂದ ವಸೂಲಿ ಮಾಡಲಾಗುತ್ತದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಈ ಕಾಯಿದೆಯು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC), ಸ್ಟಾಫ್ ಸೆಲೆಕ್ಷನ್ ಕಮಿಷನ್, ರೈಲ್ವೇಸ್, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ಎಲ್ಲಾ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳಿಗೂ ಅನ್ವಯವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT