ಎನ್ಇಇಟಿ ಹಗರಣದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ 
ದೇಶ

NEET ಹಗರಣದ ನಡುವೆ ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು ಜಾರಿಗೊಳಿಸಿದ ಕೇಂದ್ರ

NEET ಹಗರಣದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು ಜಾರಿ ಮಾಡಿದೆ.

ನವದೆಹಲಿ: NEET ಹಗರಣದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು ಜಾರಿ ಮಾಡಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮ ತಡೆಗಟ್ಟುವ ಕಾನೂನು ಜೂ.21 ರಿಂದಲೇ ಜಾರಿಗೆ ಬಂದಿದೆ. ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ, 2024 ಭಾರತದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಶಾಸನವಾಗಿದ್ದು, ವಂಚನೆಯನ್ನು ತಡೆಯುವ ಮತ್ತು ಸಾರ್ವಜನಿಕ ಪರೀಕ್ಷೆಗಳ ಸಮಗ್ರತೆಯನ್ನು ಎತ್ತಿಹಿಡಿಯುವ ಗುರಿಯನ್ನು ಹೊಂದಿದೆ.

ಫೆಬ್ರವರಿ 9, 2024 ರಂದು ಸಂಸತ್ ಅಂಗೀಕರಿಸಿದ ಕಾನೂನಿನ ಪ್ರಕಾರ, ಪರೀಕ್ಷಾ ಅಕ್ರಮಗಳಿಗೆ ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವ, ಅನ್ಯಾಯ ವಿಧಾನಗಳನ್ನು ಆಶ್ರಯಿಸುವವ ತಪ್ಪಿತಸ್ಥರಿಗೆ ರೂ 10 ಲಕ್ಷದವರೆಗೆ ದಂಡದೊಂದಿಗೆ ಜೈಲು ಶಿಕ್ಷೆಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದಾಗಿದೆ. ಕಾಯಿದೆಯಡಿಯಲ್ಲಿರುವ ಎಲ್ಲಾ ಅಪರಾಧಗಳು ಗಂಭಿರ ಮತ್ತು ಜಾಮೀನು ರಹಿತವಾಗಿರುತ್ತದೆ.

"ಕಾಯಿದೆಯ ಪ್ರಕಾರ (i) ಅನಧಿಕೃತ ಪ್ರವೇಶ ಅಥವಾ ಪ್ರಶ್ನೆ ಪತ್ರಿಕೆ ಅಥವಾ ಉತ್ತರ ಕೀ ಸೋರಿಕೆ, (ii) ಸಾರ್ವಜನಿಕ ಪರೀಕ್ಷೆಯ ಸಮಯದಲ್ಲಿ ಅಭ್ಯರ್ಥಿಗೆ ಸಹಾಯ ಮಾಡುವುದು, (iii) ಕಂಪ್ಯೂಟರ್ ನೆಟ್‌ವರ್ಕ್ ಅಥವಾ ಸಂಪನ್ಮೂಲಗಳನ್ನು ತಿದ್ದುವುದು, (iv) ಅರ್ಹತಾ ಪಟ್ಟಿ ಅಥವಾ ಶ್ರೇಣಿಯನ್ನು ಶಾರ್ಟ್‌ಲಿಸ್ಟ್ ಮಾಡಲು ಅಥವಾ ಅಂತಿಮಗೊಳಿಸಲು ದಾಖಲೆಗಳೊಂದಿಗೆ ಟ್ಯಾಂಪರಿಂಗ್ ಮಾಡುವುದು, ಮತ್ತು (v) ನಕಲಿ ಪರೀಕ್ಷೆಯನ್ನು ನಡೆಸುವುದು, ನಕಲಿ ಪ್ರವೇಶ ಕಾರ್ಡ್‌ಗಳನ್ನು ನೀಡುವುದು ಅಥವಾ ಮೋಸ ಮಾಡಲು ಪತ್ರಗಳನ್ನು ನೀಡುವುದು ಕಾಯ್ದೆ ಪ್ರಕಾರ ಅಪರಾಧವಾಗಿದೆ.

ಸಂಘಟಿತ ಪ್ರಶ್ನೆ ಪತ್ರಿಕೆ ಸೋರಿಕೆ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಸಂಸ್ಥೆಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ನಿಬಂಧನೆಗಳನ್ನು ಹೊಂದಿದೆ ಮತ್ತು ಪರೀಕ್ಷೆಯ ಪ್ರಮಾಣಾನುಗುಣವಾದ ವೆಚ್ಚವನ್ನು ಸಹ ಅದರಿಂದ ವಸೂಲಿ ಮಾಡಲಾಗುತ್ತದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಈ ಕಾಯಿದೆಯು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC), ಸ್ಟಾಫ್ ಸೆಲೆಕ್ಷನ್ ಕಮಿಷನ್, ರೈಲ್ವೇಸ್, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ಎಲ್ಲಾ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳಿಗೂ ಅನ್ವಯವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT