ಸಚಿವೆ ಆತಿಶಿ ಉಪವಾಸ ಸತ್ಯಾಗ್ರಹ 
ದೇಶ

ನವದೆಹಲಿಯಲ್ಲಿ ನೀರಿನ ಸಮಸ್ಯೆ: ಅತಿಶಿ ಅನಿರ್ದಿಷ್ಟಾವಧಿ ಉಪವಾಸ 2ನೇ ದಿನಕ್ಕೆ!

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನೀರಿನ ಸಮಸ್ಯೆ ಕುರಿತು ದೆಹಲಿ ಜಲ ಸಚಿವೆ ಅತಿಶಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ದಕ್ಷಿಣ ದೆಹಲಿಯ ಭೋಗಲ್‌ ನ 'ಜಲ ಸತ್ಯಾಗ್ರಹ' ಸ್ಥಳದಿಂದ ವೀಡಿಯೊ ಸಂದೇಶ ನೀಡಿರುವ ಅತಿಶಿ, ನಗರದ ಜನರಿಗೆ ಹೆಚ್ಚಿನ ನೀರನ್ನು ಬಿಡುಗಡೆ ಮಾಡುವವರೆಗೆ ತಾನು ಏನನ್ನೂ ತಿನ್ನುವುದಿಲ್ಲ. ನಗರದಲ್ಲಿ 28 ಲಕ್ಷ ಜನರಿಗೆ ನೀರಿನ ಕೊರತೆಯಿದೆ ಎಂದು ಅವರು ಹೇಳಿದ್ದಾರೆ.

ಯಮುನಾ ನದಿಯಲ್ಲಿ ದೆಹಲಿಯ ಪಾಲಿನ ಸರಿಯಾದ ನೀರನ್ನು ಹರಿಯಾಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಸಚಿವರು ಶುಕ್ರವಾರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದರು. ಹರಿಯಾಣದಿಂದ ದಿನಕ್ಕೆ 110 ಮಿಲಿಯನ್ ಗ್ಯಾಲನ್ ಗಿಂತಲೂ (ಎಂಜಿಡಿ) ಕಡಿಮೆ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದರು.

ಒಂದು ಎಂಜಿಡಿ ನೀರು 28,000 ಜನರಿಗೆ ಒದಗಿಸುತ್ತದೆ. 100 ಎಂಜಿಡಿ ನೀರಿನ ಕೊರತೆ ಎಂದರೆ ದೆಹಲಿಯಲ್ಲಿ 28 ಲಕ್ಷ ಜನರಿಗೆ ನೀರು ಸಿಗುತ್ತಿಲ್ಲ. ನೀರಿಗಾಗಿ ದೆಹಲಿಯು ನೆರೆಯ ರಾಜ್ಯಗಳ ಮೇಲೆ ಅವಲಂಬಿತವಾಗಿದೆ. ನೆರೆಯ ರಾಜ್ಯಗಳಿಂದ ನದಿ, ಕಾಲುವೆ ಮೂಲಕ 1,005 ಎಂಜಿಡಿ ನೀರನ್ನು ಪಡೆಯುತ್ತದೆ. ಇದರಲ್ಲಿ ಹರಿಯಾಣ 613 ಎಂಜಿಡಿ ನೀರನ್ನು ಪೂರೈಸುತ್ತದೆ. ದೆಹಲಿ ತೀವ್ರ ಬೇಸಿಗೆಯ ಶಾಖ ಎದುರಿಸುತ್ತಿದ್ದು, ಹರಿಯಾಣ ತನ್ನ ಪಾಲನ್ನು 513 ಎಂಜಿಡಿಗೆ ಕಡಿಮೆ ಮಾಡಿರುವುದರಿಂದ ನಗರದ 28 ಲಕ್ಷ ಜನರು ತೊಂದರೆ ಎದುರಿಸುವಂತಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

SCROLL FOR NEXT