ಹೇಮಂತ್ ಸೊರೇನ್ 
ದೇಶ

ಜಾರ್ಖಂಡ್ ಮಾಜಿ ಸಿಎಂ ಭೂಕಬಳಿಕೆ ಪ್ರಕರಣ: ರಾಂಚಿಯಲ್ಲಿ ಇಡಿ ದಾಳಿ; 1 ಕೋಟಿ ರೂ. ನಗದು, 100 ಲೈವ್ ಬುಲೆಟ್ ಜಪ್ತಿ

ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಇತರರ ವಿರುದ್ಧದ ಭೂಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ರಾಂಚಿಯಲ್ಲಿ ದಾಳಿ ನಡೆಸಿದೆ.

ರಾಂಚಿ: ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಇತರರ ವಿರುದ್ಧದ ಭೂಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ರಾಂಚಿಯಲ್ಲಿ ದಾಳಿ ನಡೆಸಿದ್ದು, 1 ಕೋಟಿ ರೂಪಾಯಿ ನಗದು ಮತ್ತು 100 ಲೈವ್ ಬುಲೆಟ್ ರೌಂಡ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ರಾಂಚಿಯ ಕಂಕೆ ರಸ್ತೆ ಆವರಣದಲ್ಲಿ ಕಮಲೇಶ್ ಸಿಂಗ್ ಎಂಬ ವ್ಯಕ್ತಿಯಿಂದ 100 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಮಾಜಿ ಸಿಎಂ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಹೇಮಂತ್ ಸೊರೆನ್ ವಿರುದ್ಧದ ಭೂ ಕಬಳಿಕೆ ಪ್ರಕರಣದ ತನಿಖೆಯ ಭಾಗವಾಗಿ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಮೂಲಗಳ ಪ್ರಕಾರ ಬೇರೆ ಭೂಮಿಗೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ.

ಫೆಡರಲ್ ಏಜೆನ್ಸಿಯು ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯಡಿ ಪೊಲೀಸ್ ಪ್ರಕರಣವನ್ನು ದಾಖಲಿಸಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣದ ತನಿಖೆಯ ಭಾಗವಾಗಿ ಸೋರೆನ್, ಐಎಎಸ್ ಅಧಿಕಾರಿ ಮತ್ತು ರಾಂಚಿಯ ಮಾಜಿ ಜಿಲ್ಲಾಧಿಕಾರಿ ಛವಿ ರಂಜನ್, ಭಾನು ಪ್ರತಾಪ್ ಪ್ರಸಾದ್ ಸೇರಿದಂತೆ 25 ಕ್ಕೂ ಹೆಚ್ಚು ಜನರನ್ನು ಇಡಿ ಬಂಧಿಸಿದೆ.

ರಾಂಚಿಯ ಬಾರ್ಗೈನ್ ಪ್ರದೇಶದಲ್ಲಿ 266 ಕೋಟಿ ರೂಪಾಯಿ ಮೌಲ್ಯದ 8.86 ಎಕರೆ ಜಮೀನನ್ನು ರಾಂಚಿಯಲ್ಲಿ ಸೊರೆನ್ ಅವರು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಇಡಿ ಇದುವರೆಗೆ ನಾಲ್ಕು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT