ಸಚಿವೆ ಅತಿಶಿ 
ದೇಶ

ರಾಷ್ಟ್ರ ರಾಜಧಾನಿಗೆ ನೀರು ಹರಿಸುತ್ತಿದ್ದ ಬ್ಯಾರೇಜ್ ನ ಗೇಟ್ ಗಳನ್ನು ಮುಚ್ಚಿದ ಹರಿಯಾಣ: ಉಪವಾಸ ಸತ್ಯಾಗ್ರಹ ಮುಂದುವರಿಕೆ- ಅತಿಶಿ

ದೆಹಲಿಗೆ ನೀರು ಹರಿಸುತ್ತಿದ್ದ ಹತ್ನಿಕುಂಡ್ ಬ್ಯಾರೇಜ್ ನ ಎಲ್ಲಾ ಗೇಟ್ ಗಳನ್ನು ಹರಿಯಾಣ ಸರ್ಕಾರ ಮುಚ್ಚಿದ್ದು, ಇದರ ವಿರುದ್ಧ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸುವುದಾಗಿ ದೆಹಲಿ ಜಲ ಸಚಿವೆ ಅತಿಶಿ ಹೇಳಿದ್ದಾರೆ.

ನವದೆಹಲಿ: ದೆಹಲಿಗೆ ನೀರು ಹರಿಸುತ್ತಿದ್ದ ಹತ್ನಿಕುಂಡ್ ಬ್ಯಾರೇಜ್ ನ ಎಲ್ಲಾ ಗೇಟ್ ಗಳನ್ನು ಹರಿಯಾಣ ಸರ್ಕಾರ ಮುಚ್ಚಿದ್ದು, ಇದರ ವಿರುದ್ಧ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸುವುದಾಗಿ ದೆಹಲಿ ಜಲ ಸಚಿವೆ ಅತಿಶಿ ಹೇಳಿದ್ದಾರೆ.

ತೀವ್ರ ನೀರಿನ ಸಮಸ್ಯೆಯಿಂದ ಕಂಗೆಟ್ಟಿರುವ ದೆಹಲಿಗೆ ನೀರು ಹರಿಸುವಂತೆ ಆಗ್ರಹಿಸಿ ಸಚಿವೆ ಅತಿಶಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಸಂದೇಶ ನೀಡಿರುವ ಅತಿಶಿ, ದೆಹಲಿ ಪಾಲಿನ ನೀರಿಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೇನೆ. ಹರಿಯಾಣ ಸರ್ಕಾರ 100 ಎಂಜಿಡಿ ಕೊರತೆಯಷ್ಟು ನೀರನ್ನು ಹರಿಸುತ್ತಿರುವುದರಿಂದ ದೆಹಲಿಯ 28 ಲಕ್ಷ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹತ್ನಿಕುಂಡ್ ಬ್ಯಾರೇಜ್ ನೀರಿನಿಂದ ತುಂಬಿದೆ. ಆದರೆ, ದೆಹಲಿಗೆ ನೀರು ತಲುಪಬಾರದೆಂಬ ಉದ್ದೇಶದಿಂದ ಬ್ಯಾರೇಜ್ ನ ಎಲ್ಲ ಬಾಗಿಲುಗಳನ್ನು ಮುಚ್ಚಲಾಗಿದೆ ಎಂದು ಕೆಲವು ಪತ್ರಕರ್ತರು ಹೇಳಿರುವುದಾಗಿ ಅವರು ತಿಳಿಸಿದ್ದಾರೆ. ದೆಹಲಿ ಪಾಲಿನ ನೀರು ಪಡೆಯುವವರೆಗೂ ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸುವುದಾಗಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

Video: 'ಪ್ರಾಕ್ಟಿಸ್ ಮಾಡೋಕ್ ಬಿಡ್ರೋ..': ಕ್ಯಾಮೆರಾಮನ್ ವಿರುದ್ಧ Smriti Mandhana ಅಸಮಾಧಾನ

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!

SCROLL FOR NEXT