ನವೀನ್ ಪಟ್ನಾಯಕ್, ಪ್ರಧಾನಿ ಮೋದಿ 
ದೇಶ

ಒಡಿಶಾ: ಬಿಜೆಪಿ ಜೊತೆಗಿನ ಸಂಬಂಧಕ್ಕೆ 'ಎಳ್ಳು ನೀರು' ಬಿಟ್ಟ ಬಿಜೆಡಿ!

ರಾಜ್ಯಸಭೆಯಲ್ಲಿ ಬಿಜೆಡಿಯ 9 ಸಂಸದರಿದ್ದಾರೆ. ಆದರೆ, ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಒಡಿಶಾ ರಚನೆಯಾದ 1997ರ ನಂತರ ಇದೇ ಮೊದಲ ಬಾರಿಗೆ ಒಂದೇ ಒಂದು ಸ್ಥಾನವನ್ನು ಗೆದ್ದಿಲ್ಲ.

ಒಡಿಶಾ: ಒಡಿಶಾದಲ್ಲಿ ಹಲವು ವರ್ಷಗಳಿಂದ ಬಿಜೆಪಿಯನ್ನು ಬೆಂಬಲಿಸಿಕೊಂಡು ಬರುತ್ತಿದ್ದ ಬಿಜು ಜನತಾ ದಳ, ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ನಂತರ ಕೇಸರಿ ಜೊತೆಗಿನ ಸಂಬಂಧಕ್ಕೆ ಎಳ್ಳು ನೀರು ಬಿಟ್ಟು, ಪ್ರಬಲ ವಿರೋಧ ಪಕ್ಷವಾಗಿ ಕೆಲಸ ಮಾಡುವುದಾಗಿ ಘೋಷಿಸಿದೆ.

ಸೋಮವಾರ ಪಕ್ಷದ ಒಂಬತ್ತು ರಾಜ್ಯಸಭಾ ಸಂಸದರೊಂದಿಗೆ ಸಭೆ ನಡೆಸಿದ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್, ಜೂನ್ 27 ರಂದು ಪ್ರಾರಂಭವಾಗುವ ಸಂಸತ್ತಿನ ಮುಂಬರುವ ಅಧಿವೇಶನದಲ್ಲಿ ಮೇಲ್ಮನೆಯಲ್ಲಿ ಪ್ರಬಲ ಪ್ರತಿಪಕ್ಷವಾಗಿ ಹೊರಹೊಮ್ಮುವಂತೆ ಸೂಚಿಸಿದರು. ರಾಜ್ಯದ ಹಿತಾಸಕ್ತಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸೂಕ್ತವಾದ ರೀತಿಯಲ್ಲಿ ಪ್ರಸ್ತಾಪಿಸಲು ಸಂಸದರಿಗೆ ಹೇಳಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭೆಯ ಪಕ್ಷದ ನಾಯಕ ಸಸ್ಮಿತ್ ಪಾತ್ರ, “ಬಿಜೆಡಿ ಸಂಸದರು ಈ ಬಾರಿ ಕೇವಲ ಸಮಸ್ಯೆಗಳ ಬಗ್ಗೆ ಮಾತನಾಡಲು ಸೀಮಿತರಾಗಲ್ಲ. ಆದರೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಒಡಿಶಾದ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದರೆ ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದರು. ಒಡಿಶಾಗೆ ವಿಶೇಷ ಸ್ಥಾನಮಾನದ ಬೇಡಿಕೆ, ಕಳಪೆ ಮೊಬೈಲ್ ಸಂಪರ್ಕ ಮತ್ತು ರಾಜ್ಯದಲ್ಲಿ ಕಡಿಮೆ ಬ್ಯಾಂಕ್ ಶಾಖೆಗಳು ಕುರಿತು ಧ್ವನಿ ಎತ್ತಲಾಗುವುದು ಎಂದು ಅವರು ಹೇಳಿದರು.

"ಕಲ್ಲಿದ್ದಲು ರಾಯಧನವನ್ನು ಪರಿಷ್ಕರಿಸುವ ಒಡಿಶಾದ ಬೇಡಿಕೆಯನ್ನು ಕೇಂದ್ರವು ಕಳೆದ 10 ವರ್ಷಗಳಿಂದ ನಿರ್ಲಕ್ಷಿಸಿದೆ. ಇದು ತಮ್ಮ ಹಕ್ಕಿನಿಂದ ವಂಚಿತರಾಗಿರುವ ರಾಜ್ಯದ ಜನರಿಗೆ ಹೆಚ್ಚಿನ ನಷ್ಟವನ್ನುಂಟುಮಾಡುತ್ತಿದೆ. 9 ರಾಜ್ಯಸಭೆ ಸಂಸದರು ವಿರೋಧ ಪಕ್ಷದವರಾಗಿ ಪ್ರಬಲರಾಗಿರುವಂತೆ, ತಮ್ಮ ರಾಜ್ಯದ ಜನರ ಹಕ್ಕನ್ನು ರಕ್ಷಿಸಲು ಹೋರಾಡುವಂತೆ ಪಟ್ನಾಯಕ್ ಸೂಚನೆ ನೀಡಿದ್ದಾರೆ. ಬಿಜೆಪಿಗೆ ಇನ್ನು ಮುಂದೆ ಬೆಂಬಲ ನೀಡಲ್ಲ, ಕೇವಲ ವಿರೋಧ ಪಕ್ಷವಷ್ಟೇ,. ರಾಜ್ಯದ ಹಿತಾಸಕ್ತಿ ರಕ್ಷಿಸಲು ಯಾವುದೇ ಹಂತಕ್ಕೂ ಹೋಗಲು ಸಿದ್ಧ ಎಂದು ಅವರು ಹೇಳಿದರು.

ರಾಜ್ಯಸಭೆಯಲ್ಲಿ ಬಿಜೆಡಿಯ 9 ಸಂಸದರಿದ್ದಾರೆ. ಆದರೆ, ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಒಡಿಶಾ ರಚನೆಯಾದ 1997ರ ನಂತರ ಇದೇ ಮೊದಲ ಬಾರಿಗೆ ಒಂದೇ ಒಂದು ಸ್ಥಾನವನ್ನು ಗೆದ್ದಿಲ್ಲ. ಅಲ್ಲದೇ ವಿಧಾನಸಭೆ ಚುನಾವಣೆಯಲ್ಲಿ ಕಳೆದ 24 ವರ್ಷಗಳಿಂದ ಆಡಳಿತ ನಡೆಸಿದ ಬಿಜೆಡಿಯನ್ನು ಅಧಿಕಾರದಿಂದ ದೂರ ಇಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಸಂಸತ್ತಿನಲ್ಲಿ ಕಳೆದ ಹಲವು ವರ್ಷಗಳಿಂದ ಅನೇಕ ವಿಚಾರಗಳಲ್ಲಿ ಬಿಜೆಪಿಯನ್ನು ಬಿಜೆಡಿ ಬೆಂಬಲಿಸುತ್ತಾ ಬಂದಿತ್ತು. 2019 ಮತ್ತು 2024ರಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗೆಲ್ಲುವಲ್ಲಿಯೂ ನೆರವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT