ದೇಶ

ಸಂವಿಧಾನ ರಕ್ಷಣೆಗೆ ಹೋರಾಟ ಮಾಡ್ತೀವಿ: ವೇಣುಗೋಪಾಲ್

ಸಂವಿಧಾನದ ರಕ್ಷಣೆಗಾಗಿ ಜನರು ಇಂಡಿಯಾ ಬಣಕ್ಕೆ ಬಹುದೊಡ್ಡ ಜವಾಬ್ದಾರಿ ನೀಡಿದ್ದಾರೆ ಮತ್ತು ಅದಕ್ಕಾಗಿ ಪ್ರತಿಪಕ್ಷಗಳು ಹೋರಾಡಲು ನಿರ್ಧರಿಸಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಸೋಮವಾರ ಹೇಳಿದ್ದಾರೆ.

ನವದೆಹಲಿ: ಸಂವಿಧಾನದ ರಕ್ಷಣೆಗಾಗಿ ಜನರು ಇಂಡಿಯಾ ಬಣಕ್ಕೆ ಬಹುದೊಡ್ಡ ಜವಾಬ್ದಾರಿ ನೀಡಿದ್ದಾರೆ ಮತ್ತು ಅದಕ್ಕಾಗಿ ಪ್ರತಿಪಕ್ಷಗಳು ಹೋರಾಡಲು ನಿರ್ಧರಿಸಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂವಿಧಾನದೊಂದಿಗೆ ಆಟವಾಡಲು ಪ್ರಯತ್ನಿಸುತ್ತಿರುವುದರಿಂದ ನಮ್ಮ ಎಲ್ಲಾ ಸದಸ್ಯರಿಗೆ ಸಂವಿಧಾನದ ಪ್ರತಿಯೊಂದಿಗೆ ಬರಲು ಕೇಳಿದ್ದೇವೆ. 400 ಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂಬ ಅವರ ಎಲ್ಲಾ ಮಾತುಗಳು ನೆಲಚ್ಚಿವೆ. ಜನರು ನಮಗೆ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ ಮತ್ತು ಸಂವಿಧಾನವನ್ನು ರಕ್ಷಿಸಲು ನಾವು ಜನರಿಗೆ ನಮ್ಮ ಮಾತನ್ನು ನೀಡಿದ್ದೇವೆ ಎಂದರು.

ಲೋಕಸಭೆಯಲ್ಲಿ ಉಪಸಭಾಪತಿ ಸ್ಥಾನದ ಕುರಿತು ಮಾತನಾಡಿದ ಅವರು, ಪ್ರತಿಪಕ್ಷಗಳು ಅದನ್ನು ಪಡೆಯಬೇಕು ಎಂಬುದು ಚರ್ಚೆಯಾಗಿದೆ. ಎರಡು ಯುಪಿಎ ಸರ್ಕಾರಗಳ ಅವಧಿಯಲ್ಲಿ ನಾವು ಅಂದಿನ ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನವನ್ನು ನೀಡಿದ್ದೇವೆ. ಈ ಬಾರಿ ಏನಾಗುತ್ತದೋ ನೋಡುತ್ತೇವೆ ಎಂದರು.

ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕನ ಪಾತ್ರವನ್ನು ವಹಿಸಿಕೊಂಡ ನಂತರ, ನಿರ್ಧಾರವು ಗಾಂಧಿಯವರದ್ದೇ ಆಗಿರಬೇಕು ಎಂದು ಹೇಳಿದರು. ವೇಣುಗೋಪಾಲ್ ಅವರು 2009 ರಿಂದ 2019 ರವರೆಗೆ ಆಲಪ್ಪುಳದಿಂದ ಲೋಕಸಭೆಗೆ ಸತತವಾಗಿ ಎರಡು ಬಾರಿ ಗೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT