ದೇಶ

ಸಂವಿಧಾನ ರಕ್ಷಣೆಗೆ ಹೋರಾಟ ಮಾಡ್ತೀವಿ: ವೇಣುಗೋಪಾಲ್

ಸಂವಿಧಾನದ ರಕ್ಷಣೆಗಾಗಿ ಜನರು ಇಂಡಿಯಾ ಬಣಕ್ಕೆ ಬಹುದೊಡ್ಡ ಜವಾಬ್ದಾರಿ ನೀಡಿದ್ದಾರೆ ಮತ್ತು ಅದಕ್ಕಾಗಿ ಪ್ರತಿಪಕ್ಷಗಳು ಹೋರಾಡಲು ನಿರ್ಧರಿಸಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಸೋಮವಾರ ಹೇಳಿದ್ದಾರೆ.

ನವದೆಹಲಿ: ಸಂವಿಧಾನದ ರಕ್ಷಣೆಗಾಗಿ ಜನರು ಇಂಡಿಯಾ ಬಣಕ್ಕೆ ಬಹುದೊಡ್ಡ ಜವಾಬ್ದಾರಿ ನೀಡಿದ್ದಾರೆ ಮತ್ತು ಅದಕ್ಕಾಗಿ ಪ್ರತಿಪಕ್ಷಗಳು ಹೋರಾಡಲು ನಿರ್ಧರಿಸಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂವಿಧಾನದೊಂದಿಗೆ ಆಟವಾಡಲು ಪ್ರಯತ್ನಿಸುತ್ತಿರುವುದರಿಂದ ನಮ್ಮ ಎಲ್ಲಾ ಸದಸ್ಯರಿಗೆ ಸಂವಿಧಾನದ ಪ್ರತಿಯೊಂದಿಗೆ ಬರಲು ಕೇಳಿದ್ದೇವೆ. 400 ಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂಬ ಅವರ ಎಲ್ಲಾ ಮಾತುಗಳು ನೆಲಚ್ಚಿವೆ. ಜನರು ನಮಗೆ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ ಮತ್ತು ಸಂವಿಧಾನವನ್ನು ರಕ್ಷಿಸಲು ನಾವು ಜನರಿಗೆ ನಮ್ಮ ಮಾತನ್ನು ನೀಡಿದ್ದೇವೆ ಎಂದರು.

ಲೋಕಸಭೆಯಲ್ಲಿ ಉಪಸಭಾಪತಿ ಸ್ಥಾನದ ಕುರಿತು ಮಾತನಾಡಿದ ಅವರು, ಪ್ರತಿಪಕ್ಷಗಳು ಅದನ್ನು ಪಡೆಯಬೇಕು ಎಂಬುದು ಚರ್ಚೆಯಾಗಿದೆ. ಎರಡು ಯುಪಿಎ ಸರ್ಕಾರಗಳ ಅವಧಿಯಲ್ಲಿ ನಾವು ಅಂದಿನ ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನವನ್ನು ನೀಡಿದ್ದೇವೆ. ಈ ಬಾರಿ ಏನಾಗುತ್ತದೋ ನೋಡುತ್ತೇವೆ ಎಂದರು.

ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕನ ಪಾತ್ರವನ್ನು ವಹಿಸಿಕೊಂಡ ನಂತರ, ನಿರ್ಧಾರವು ಗಾಂಧಿಯವರದ್ದೇ ಆಗಿರಬೇಕು ಎಂದು ಹೇಳಿದರು. ವೇಣುಗೋಪಾಲ್ ಅವರು 2009 ರಿಂದ 2019 ರವರೆಗೆ ಆಲಪ್ಪುಳದಿಂದ ಲೋಕಸಭೆಗೆ ಸತತವಾಗಿ ಎರಡು ಬಾರಿ ಗೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT