ಅತಿಶಿ 
ದೇಶ

ನವದೆಹಲಿ: ಸಚಿವೆ ಅತಿಶಿ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ, ಹದಗೆಟ್ಟ ಆರೋಗ್ಯ!

ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ನೀರಿನ `ಕೊರತೆ ವಿರುದ್ಧ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಲ ಸಚಿವೆ ಅತಿಶಿ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ ಎಂದು ಎಎಪಿ ಸೋಮವಾರ ಹೇಳಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ನೀರಿನ `ಕೊರತೆ ವಿರುದ್ಧ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಲ ಸಚಿವೆ ಅತಿಶಿ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ ಎಂದು ಎಎಪಿ ಸೋಮವಾರ ಹೇಳಿದೆ. ಅವರ ತೂಕ 65.8 ಕೆಜಿಯಿಂದ 63.6 ಕೆಜಿಗೆ ಇಳಿದಿದೆ. 4 ದಿನಗಳಲ್ಲಿ 2.2 ಕೆಜಿಯಷ್ಟು ತೂಕ ಕಡಿಮೆಯಾಗಿದೆ ಎಂದು ಪಕ್ಷ ಹೇಳಿದೆ.

ಉಪವಾಸ ಸತ್ಯಾಗ್ರಹದ ಮೊದಲ ದಿನಕ್ಕೆ ಹೋಲಿಸಿದರೆ ಅತಿಶಿ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣವು 4ನೇ ದಿನ 28 ಯೂನಿಟ್‌ಗಳಷ್ಟು ಕಡಿಮೆಯಾಗಿದೆ. ಇದರೊಂದಿಗೆ ಆಕೆಯ ರಕ್ತದೊತ್ತಡದ ಮಟ್ಟವೂ ಕಡಿಮೆಯಾಗಿದೆ. ಅತಿಶಿಯ ರಕ್ತದಲ್ಲಿನ ಸಕ್ಕರೆಯ ಮಟ್ಟ, ರಕ್ತದೊತ್ತಡ ಮತ್ತು ತೂಕ ಕಡಿಮೆಯಾಗುತ್ತಿರುವ ವೇಗವನ್ನು ವೈದ್ಯರು ಅಪಾಯಕಾರಿ ಎಂದು ವಿವರಿಸಿದ್ದಾರೆ. ಅವರ ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿದೆ. ಇದು ದೇಹವನ್ನು ಹಾನಿಗೊಳಿಸುತ್ತದೆ ಎಎಪಿ ಹೇಳಿದೆ.

ಈ ಮಧ್ಯೆ ಉಪವಾಸ ಮುಂದುವರಿಸುವುದಾಗಿ ಅತಿಶಿ ಸ್ಪಷ್ಟಪಡಿಸಿದ್ದಾರೆ. ನನ್ನ ಆರೋಗ್ಯವು ಎಷ್ಟೇ ಹದಗೆಟ್ಟರೂ, ದೆಹಲಿಯವರಿಗೆ ನ್ಯಾಯಯುತವಾದ ನೀರು ಸಿಗುವಂತೆ ಖಾತ್ರಿಪಡಿಸುತ್ತೇನೆ. ಹರಿಯಾಣ ಸರ್ಕಾರ 28 ಲಕ್ಷ ದೆಹಲಿಯವರಿಗೆ ನೀರು ಒದಗಿಸುವವರೆಗೆ ಉಪವಾಸ ಸತ್ಯಾಗ್ರಹ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ. ನೀರಿನ ಬಿಕ್ಕಟ್ಟನ್ನು ಆದ್ಯತೆಯ ಮೇಲೆ ಪರಿಹರಿಸುವಂತೆ ಒತ್ತಾಯಿಸಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ದಿನದಂದು ಸಚಿವರ ಆರೋಗ್ಯದ ಬಗ್ಗೆ ಎಎಪಿ ಕಳವಳ ವ್ಯಕ್ತಪಡಿಸಿದೆ.

ಅತಿಶಿ ಅವರ ತೂಕ ಮತ್ತು ರಕ್ತದೊತ್ತಡ ವೇಗವಾಗಿ ಕಡಿಮೆಯಾಗುತ್ತಿದೆ ಎಂದು ಎಎಪಿ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. ಆದರೆ, ಅತಿಶಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದು, ಹರಿಯಾಣ ನೀರು ಬಿಡುವವರೆಗೂ ಉಪವಾಸ ಮುಂದುವರಿಸುವುದಾಗಿ ಹೇಳಿದ್ದಾರೆ. ದೆಹಲಿಯ ನೀರಿನ ಅವಶ್ಯಕತೆ ದಿನಕ್ಕೆ 1,005 ಮಿಲಿಯನ್ ಗ್ಯಾಲನ್‌ಗಳು (MGD) ಆದರೆ ಹರಿಯಾಣದಿಂದ ಸುಮಾರು 613 MGD ನೀರು ಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT