ಸಿಎಂ ಸ್ಟಾಲಿನ್ 
ದೇಶ

ಸರ್ಕಾರದಲ್ಲಿ ಖಾಲಿ ಇರುವ 75 ಸಾವಿರ ಹುದ್ದೆಗಳು ಜನವರಿ 2026 ರೊಳಗೆ ಭರ್ತಿ: ತಮಿಳುನಾಡು ಸಿಎಂ

ಇಂದು ವಿಧಾನಸಭೆಯಲ್ಲಿ ನಿಯಮ 110ರ ಅಡಿಯಲ್ಲಿ ಹೇಳಿಕೆ ನೀಡಿದ ಸಿಎಂ ಸ್ಟಾಲಿನ್, ಇನ್ನು 18 ತಿಂಗಳೊಳಗೆ ಅಂದರೆ 2026ರ ಜನವರಿ ವೇಳೆಗೆ ತಮಿಳುನಾಡು ಲೋಕಸೇವಾ ಆಯೋಗದ ಮೂಲಕ 17,595 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಚೆನ್ನೈ: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 75,000 ಹುದ್ದೆಗಳನ್ನು ಜನವರಿ 2026 ರೊಳಗೆ ಭರ್ತಿ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ನಿಯಮ 110ರ ಅಡಿಯಲ್ಲಿ ಹೇಳಿಕೆ ನೀಡಿದ ಸಿಎಂ ಸ್ಟಾಲಿನ್, ಇನ್ನು 18 ತಿಂಗಳೊಳಗೆ ಅಂದರೆ 2026ರ ಜನವರಿ ವೇಳೆಗೆ ತಮಿಳುನಾಡು ಲೋಕಸೇವಾ ಆಯೋಗದ ಮೂಲಕ 17,595 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮತ್ತು ತಮಿಳುನಾಡು ಶಿಕ್ಷಕರ ನೇಮಕಾತಿ ಮಂಡಳಿಯ ಮೂಲಕ 19,260 ಶಿಕ್ಷಕರ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಅದೇ ರೀತಿ 3,041 ಹುದ್ದೆಗಳನ್ನು ವೈದ್ಯಕೀಯ ಸೇವೆಗಳ ನೇಮಕಾತಿ ಮಂಡಳಿಯ ಮೂಲಕ ಮತ್ತು 6,688 ಹುದ್ದೆಗಳನ್ನು ತಮಿಳುನಾಡು ಏಕರೂಪ ಸೇವೆಗಳ ನೇಮಕಾತಿ ಮಂಡಳಿಯ ಮೂಲಕ ಭರ್ತಿ ಮಾಡಲಾಗುವುದು. ಅಲ್ಲದೆ, ಸಮಾಜ ಕಲ್ಯಾಣ ಮತ್ತು ಪುರಸಭೆ ಆಡಳಿತ ಮತ್ತು ನೀರು ಸರಬರಾಜು ಇಲಾಖೆಗಳಲ್ಲಿ ಖಾಲಿ ಇರುವ 30,219 ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು ಎಂದು ಸ್ಟಾಲಿನ್ ಹೇಳಿದರು.

ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಗುಣಮಟ್ಟದ ಶಾಲಾ ಶಿಕ್ಷಣ ಹಾಗೂ ಉನ್ನತ ಶಿಕ್ಷಣವನ್ನು ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ತಮಿಳುನಾಡು ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಹೇಳಿದ ಅವರು, ಶಿಕ್ಷಣದ ಮೂಲಕ ನಾವು ಬೌದ್ಧಿಕ ಆರ್ಥಿಕತೆಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಎಂದರು.

2021 ರಲ್ಲಿ ಡಿಎಂಕೆ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 32,774 ಖಾಲಿ ಹುದ್ದೆಗಳನ್ನು ವಿವಿಧ ನೇಮಕಾತಿ ಏಜೆನ್ಸಿಗಳ ಮೂಲಕ ನೇಮಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಒಟ್ಟು 65,483 ಯುವಕರು ಸರ್ಕಾರಿ ಸೇವೆಗೆ ಸೇರಿದ್ದಾರೆ ಎಂದು ಸ್ಟಾಲಿನ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT