ಸಿಎಂ ಸ್ಟಾಲಿನ್ 
ದೇಶ

ಸರ್ಕಾರದಲ್ಲಿ ಖಾಲಿ ಇರುವ 75 ಸಾವಿರ ಹುದ್ದೆಗಳು ಜನವರಿ 2026 ರೊಳಗೆ ಭರ್ತಿ: ತಮಿಳುನಾಡು ಸಿಎಂ

ಇಂದು ವಿಧಾನಸಭೆಯಲ್ಲಿ ನಿಯಮ 110ರ ಅಡಿಯಲ್ಲಿ ಹೇಳಿಕೆ ನೀಡಿದ ಸಿಎಂ ಸ್ಟಾಲಿನ್, ಇನ್ನು 18 ತಿಂಗಳೊಳಗೆ ಅಂದರೆ 2026ರ ಜನವರಿ ವೇಳೆಗೆ ತಮಿಳುನಾಡು ಲೋಕಸೇವಾ ಆಯೋಗದ ಮೂಲಕ 17,595 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಚೆನ್ನೈ: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 75,000 ಹುದ್ದೆಗಳನ್ನು ಜನವರಿ 2026 ರೊಳಗೆ ಭರ್ತಿ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ನಿಯಮ 110ರ ಅಡಿಯಲ್ಲಿ ಹೇಳಿಕೆ ನೀಡಿದ ಸಿಎಂ ಸ್ಟಾಲಿನ್, ಇನ್ನು 18 ತಿಂಗಳೊಳಗೆ ಅಂದರೆ 2026ರ ಜನವರಿ ವೇಳೆಗೆ ತಮಿಳುನಾಡು ಲೋಕಸೇವಾ ಆಯೋಗದ ಮೂಲಕ 17,595 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮತ್ತು ತಮಿಳುನಾಡು ಶಿಕ್ಷಕರ ನೇಮಕಾತಿ ಮಂಡಳಿಯ ಮೂಲಕ 19,260 ಶಿಕ್ಷಕರ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಅದೇ ರೀತಿ 3,041 ಹುದ್ದೆಗಳನ್ನು ವೈದ್ಯಕೀಯ ಸೇವೆಗಳ ನೇಮಕಾತಿ ಮಂಡಳಿಯ ಮೂಲಕ ಮತ್ತು 6,688 ಹುದ್ದೆಗಳನ್ನು ತಮಿಳುನಾಡು ಏಕರೂಪ ಸೇವೆಗಳ ನೇಮಕಾತಿ ಮಂಡಳಿಯ ಮೂಲಕ ಭರ್ತಿ ಮಾಡಲಾಗುವುದು. ಅಲ್ಲದೆ, ಸಮಾಜ ಕಲ್ಯಾಣ ಮತ್ತು ಪುರಸಭೆ ಆಡಳಿತ ಮತ್ತು ನೀರು ಸರಬರಾಜು ಇಲಾಖೆಗಳಲ್ಲಿ ಖಾಲಿ ಇರುವ 30,219 ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು ಎಂದು ಸ್ಟಾಲಿನ್ ಹೇಳಿದರು.

ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಗುಣಮಟ್ಟದ ಶಾಲಾ ಶಿಕ್ಷಣ ಹಾಗೂ ಉನ್ನತ ಶಿಕ್ಷಣವನ್ನು ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ತಮಿಳುನಾಡು ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಹೇಳಿದ ಅವರು, ಶಿಕ್ಷಣದ ಮೂಲಕ ನಾವು ಬೌದ್ಧಿಕ ಆರ್ಥಿಕತೆಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಎಂದರು.

2021 ರಲ್ಲಿ ಡಿಎಂಕೆ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 32,774 ಖಾಲಿ ಹುದ್ದೆಗಳನ್ನು ವಿವಿಧ ನೇಮಕಾತಿ ಏಜೆನ್ಸಿಗಳ ಮೂಲಕ ನೇಮಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಒಟ್ಟು 65,483 ಯುವಕರು ಸರ್ಕಾರಿ ಸೇವೆಗೆ ಸೇರಿದ್ದಾರೆ ಎಂದು ಸ್ಟಾಲಿನ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT